ಈರುಳ್ಳಿ, ಬೆಳ್ಳುಳ್ಳಿ ತಿನ್ನಲು ಪತಿ ಕುಟುಂಬಸ್ಥರ ಒತ್ತಾಯ – ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಅಹಮದಾಬಾದ್: ಪತಿ ಮನೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯಿಂದ ತಯಾರಿಸಿದ ಆಹಾರ ತಿನ್ನಲು ಒತ್ತಾಯ ಮಾಡಿದ್ದು, ನಿರಾಕರಿಸಿದಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗುಜರಾತ್ ನ ಕಾದಿ ಟೌನ್ ನಿವಾಸಿಯಾದ 25 ವರ್ಷದ ಮಹಿಳೆ ಪತಿ ಹಾಗೂ ಕುಟುಂಬದ ವಿರುದ್ಧ ಜುಲೈ 10 ರಂದು ಗಾಂಧಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಸಹೋದರನ ಸ್ನೇಹಿತನನ್ನು ಪ್ರೀತಿಸಿ 4 ವರ್ಷಗಳ ಹಿಂದೆ ಮದುವೆಯಾಗಿದ್ದಾಗಿದ್ದು, ಪತಿ ಟೀ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾನು ಖಾಸಗಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಿ ತಿಳಿಸಿದ್ದಾರೆ. ಅಂದಹಾಗೇ ಮಹಿಳೆ ದೂರಿನಲ್ಲಿ ತಾನು ಪಾಟೇಲ್ ಸಮುದಾಯಕ್ಕೆ ಸೇರಿದ್ದಾಗಿ ತಿಳಿಸಿದ್ದು, ತಾನು ಸ್ವಾಮಿನಾರಾಯಣ್ ಪಂಥದ ಅನುಯಾಯಿ ಎಂದು ಹೇಳಿದ್ದಾರೆ. ಆಹಾರದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಸೇವನೆ ಮಾಡಿದರೆ ತನ್ನ ಧಾರ್ಮಿಕ ನಂಬಿಕೆಗೆ ತೊಂದರೆಯಾಗುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪತಿಯ ವಿರುದ್ಧ ಹಲ್ಲೆ ಹಾಗೂ ಗೃಹ ಹಿಂಸೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *