ತಮಿಳುನಾಡು ದೇಗುಲದತ್ತ ಎಚ್‍ಡಿಡಿ ಪ್ರಯಾಣ!

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಮತ್ತೆ ಟೆಂಪಲ್ ರನ್ ಮುಂದುವರಿಸಿದ್ದು, ಈಗ ತಮಿಳುನಾಡಿನ ದೇಗುಲದತ್ತ ಪ್ರಯಾಣ ಬೆಳೆಸಿದ್ದಾರೆ.

ದೇವೇಗೌಡರು ಮೊದಲಿಗೆ ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಶ್ರೀರಂಗಂಗೆ ಪ್ರಯಾಣ ಬೆಳಸಲಿದ್ದಾರೆ. ಶ್ರೀರಂಗಂನಲ್ಲಿ ದೇವೇಗೌಡರು ರಂಗನಾಥ ಸ್ವಾಮಿ ದೇವರ ದರ್ಶನ ಪಡೆಯಲಿದ್ದಾರೆ.

ಕಳೆದ ವಾರ ವಾರವಷ್ಟೇ ದೇವೇಗೌಡರು ಧರ್ಮಸ್ಥಳ, ಶನಿವಾರ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಬಂದಿದ್ದರು. ಇದೀಗ ಮತ್ತೆ ತಮ್ಮ ಟೆಂಪಲ್ ರನ್ ಮುಂದುವರಿಸಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ದೇವೇಗೌಡರು ತೆರಳಿದ್ದಾರೆ.

ದೇವೇಗೌಡರೊಂದಿಗೆ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಕೂಡ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಕೂಡ ದೇಗುಲ ಪ್ರವಾಸ ಮಾಡಬೇಕಿತ್ತು. ಆದರೆ ಸಿಎಂ ಕೊನೆ ಕ್ಷಣದಲ್ಲಿ ದೇಗುಲ ಪ್ರವಾಸ ಕೈ ಬಿಟ್ಟಿದ್ದಾರೆ. ಹೀಗಾಗಿ ದೇವೇಗೌಡ ಹಾಗೂ ರೇವಣ್ಣ ಮಾತ್ರ ಪ್ರವಾಸ ಕೈಗೊಂಡಿದ್ದಾರೆ. ದೇವೇಗೌಡರು ಎರಡು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲಿದ್ದಾರೆ.

Comments

Leave a Reply

Your email address will not be published. Required fields are marked *