ನೀರಾವರಿ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ, ಡಿಕೆಶಿ ಜೊತೆ ಚೆನ್ನಾಗಿದ್ದೀನಿ: ಎಚ್.ಡಿ ರೇವಣ್ಣ

ಹುಬ್ಬಳ್ಳಿ: ನಾನು ಮತ್ತು ಜನಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಚೆನ್ನಾಗಿದ್ದೀವಿ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಲೋಕೋಪಯೋಗಿ ಇಲಾಖೆ ಕೆಲಸ ಮಾತ್ರ ಮಾಡುತ್ತಿರುವುದು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. ನೀರಾವರಿ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಇದನ್ನ ನಾನು ಕಾಂಗ್ರೆಸ್ ಅಧ್ಯಕ್ಷರಿಗೆ ಬಹಿರಂಗವಾಗಿ ಹೇಳಿದ್ದೇನೆ. ಹಸ್ತಕ್ಷೇಪ ಮಾಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷರು ಕೇಳಿದ್ರೆ ಉತ್ತರ ಕೊಡುತ್ತೇನೆ. ಪೂರ್ಣ ಬಜೆಟ್, ಪೂರಕ ಬಜೆಟ್ ಬಗ್ಗೆ ನನ್ನ ಸಲಹೆ ಕೇಳಿದರೆ ಹೇಳುತ್ತೇನೆ ಎಂದು ಹೇಳಿದ್ದಾರೆ.

ಉನ್ನತ ಶಿಕ್ಷಣಕ್ಕೆ ಬಸವರಾಜ್ ಹೊರಟ್ಟಿ ಅವರದ್ದೇ ಆದ ಕೊಡುಗೆ ಇದೆ. ಹೊರಟ್ಟಿಯವರು ನಮ್ಮ ನಾಯಕರು, ಯಾವ ಖಾತೆ ಕೊಟ್ಟರೂ ಅವರಿಗೆ ನಿರ್ವಹಿಸುವ ಸಾಮರ್ಥ್ಯವಿದೆ. ಹೊರಟ್ಟಿಯವರಿಗೆ ಸಚಿವ ಸ್ಥಾನ ಕೊಡುವಂತೆ ದೇವೇಗೌಡರು ಕುಮಾರಸ್ವಾಮಿಯವರಿಗೆ ಕೇಳುತ್ತೇನೆ. ರಂಗಪ್ಪರನ್ನು ಸಲಹೆಗಾರರಾಗಿ ನೇಮಕ ಮಾಡುವ ವಿಚಾರ ಮುಖ್ಯಮಂತ್ರಿ ಬಿಟ್ಟಿದ್ದು ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *