ಅಭಿಮಾನ ಆವೇಶವಾಗಬಾರದು, ಅಭಿಮಾನ ಹಾಡಿನಂತಿರಬೇಕು: ಪತ್ರ ಬರೆದ ಹಂಸಲೇಖ

ಬೆಂಗಳೂರು: ಇತ್ತೀಚೆಗಷ್ಟೇ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ ಬಳಿಕ ಕ್ಷಮೆ ಕೇಳಿದ್ದ ಹಂಸಲೇಖ ಅವರು ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿ ಕುರಿತು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಆರೋಗ್ಯ ಕ್ಷೇಮವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ನೀಡಿದೆ ಹಾಗೂ ಲಕ್ಷಾಂತರ ಅಭಿಮಾನಿಗಳು ನನಗೆ ಧೈರ್ಯ ತುಂಬಿದ್ದಾರೆ ಎಂದು ನಾದ ಬ್ರಹ್ಮ ಹಂಸಲೇಖ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಕೇಳಲಿದೆ ಜೆಸಿಬಿ ಸದ್ದು – ಶೀಘ್ರವೇ ರಾಜಕಾಲುವೆ ಒತ್ತುವರಿ ತೆರವು

ಪೋಸ್ಟ್‌ನಲ್ಲಿ ಏನಿದೆ?
ಪೂಜ್ಯ ಕರ್ನಾಟಕವೇ.. ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೆ ಎಂದು ಇಡೀ ಕರ್ನಾಟಕದಿಂದ ಕರೆಗಳು ಬರುತ್ತಿವೆ. ಎಲ್ಲರೂ ಆರೋಗ್ಯದ ಕುರಿತು ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿಯನ್ನು ಪಡೆಯೋಕೆ ನಾನು ತುಂಬಾನೇ ಸವೆದಿದ್ದೀನಿ. ಸಹಿಸಿದ್ದೀನಿ. ಇದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.

ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆಯನ್ನು ಕೊಟ್ಟಿದೆ. ಇಡೀ ಕರ್ನಾಟಕದ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸಿದ್ದಾರೆ. ಇದನ್ನೂ ಓದಿ: ಇಳಕಲ್ ಸೀರೆಯುಟ್ಟು ಹಾಟ್ ಪೋಸ್ ಕೊಟ್ಟ ರಾಗಿಣಿ

ಅಭಿಮಾನ ಆವೇಶವಾಗಬಾರದು, ಆವೇಶ ಅವಗಢಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತಿರಬೇಕು. ಹಾಡು ಕೇಳಿಸುತ್ತದೆ. ಹಾಡು ಮುಟ್ಟುಸುತ್ತದೆ ಎಂದು ಹಂಸಲೇಖ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *