ಡಿಸಿಎಂ ಹುದ್ದೆ ತೆಗೆದ್ರೆ ಸಂತೋಷ: ವಾಲ್ಮೀಕಿ ಶ್ರೀ

ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಈಗ ಡಿಸಿಎಂ ಹುದ್ದೆ ತೆಗೆದರೆ ಸಂತೋಷ. ಇದರಿಂದ ಸರ್ಕಾರದಲ್ಲಿರುವ ಗೊಂದಲವಾದರೂ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಡಿಸಿಎಂ ಹುದ್ದೆ ತೆಗೆಯಲು ನಮ್ಮದೇನೂ ವಿರೋಧವಿಲ್ಲ ಎಂದರು.

ಆಕಸ್ಮಾತ್ ಡಿಸಿಎಂ ಹುದ್ದೆ ಮುಂದುವರಿಸಿದರೆ, ನಮ್ಮ ಸಮುದಾಯಕ್ಕೊಂದು ಅವಕಾಶ ನೀಡಬೇಕು. ಯಾಕಂದರೆ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ವಾಲ್ಮೀಕಿ ಸಮಾಜದ ಶಾಸಕರನ್ನು ಡಿಸಿಎಂ ಮಾಡುವುದಾಗಿ ಹೇಳಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಅದರಲ್ಲೂ ವಾಲ್ಮೀಕಿ ಸಮಾಜ ರಾಜ್ಯದ ನಾಲ್ಕನೇ ಅತಿ ದೊಡ್ಡ ಸಮಾಜವಾಗಿದ್ದು, ನಮ್ಮ ಸಮುದಾಯದಿಂದ ಇಬ್ಬರು ಡಿಸಿಎಂ ಹುದ್ದೆಗೆ ಪ್ರಭಲ ಆಕಾಂಕ್ಷಿಗಳಿದ್ದಾರೆ. ರಮೇಶ್ ಜಾರಕಿಹೊಳಿ, ಶ್ರೀರಾಮುಲು ಈ ಇಬ್ಬರಲ್ಲಿ ಇಬ್ಬರಲ್ಲಿ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ತಿಳಿಸಿದರು.

Comments

Leave a Reply

Your email address will not be published. Required fields are marked *