ಐರ್ಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ – ಹಾರ್ದಿಕ್ ಪಾಂಡ್ಯ ನಾಯಕ, ತ್ರಿಪಾಠಿಗೆ ಕರೆ

hardik

ಮುಂಬೈ: ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಬ್ಯಾಟಿಂಗ್‍ನಲ್ಲಿ ಮಿಂಚುಹರಿಸಿದ ರಾಹುಲ್ ತ್ರಿಪಾಠಿಗೆ ರಾಷ್ಟ್ರೀಯ ತಂಡದ ಪರ ಆಡಲು ಕರೆ ಬಂದಿದೆ. ಜೊತೆಗೆ ಆಫ್ರಿಕಾ ಸರಣಿಯಿಂದ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್‍ಗೆ ತಂಡದಲ್ಲಿ ಸ್ಥಾನ ಕಲ್ಪಿಸಿಕೊಡಲಾಗಿದೆ. ಇನ್ನುಳಿದಂತೆ ಬಹುತೇಕ ಯುವ ಪಡೆಯನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸರಣಿ ಗೆದ್ದ ಇಂಗ್ಲೆಂಡ್‍ಗೆ ಶಾಕ್ – ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಪಾಯಿಂಟ್ ಕಡಿತ

ಗಾಯಳುವಾಗಿ ತಂಡದಿಂದ ಹೊರಗುಳಿದಿರುವ ಸೂರ್ಯಕುಮಾರ್ ಯಾದವ್ ತಂಡಕ್ಕೆ ವಾಪಸ್ಸಾಗಿದ್ದು, ತಂಡದ ಹಿರಿಯ ಆಟಗಾರನಾಗಿ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: IPL ಈಗ ವಿಶ್ವದ ದುಬಾರಿ ಲೀಗ್ – ಆದರೂ ಒಲಿಂಪಿಕ್ಸ್‌ನಲ್ಲಿ ಯಾಕಿಲ್ಲ?

ತಂಡ ಹೀಗಿದೆ:
ಹಾರ್ದಿಕ್ ಪಾಂಡ್ಯ (C), ಭುವನೇಶ್ವರ್ ಕುಮಾರ್ (VC), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (WK), ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಹರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

Live Tv

Comments

Leave a Reply

Your email address will not be published. Required fields are marked *