ಹಾಸನದಲ್ಲಿ ಹೆಚ್ಚಿದ ಜೆಡಿಎಸ್ ಬಲ – ಬಿಜೆಪಿ ತೊರೆದು ತೆನೆಯ ಹೊರೆ ಹೊತ್ತ ಕಮಲ ನಾಯಕರು

ಹಾಸನ: ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪಜ್ವಲ್ ರೇವಣ್ಣ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬಲ ಹೆಚ್ಚಾಗಿದೆ. ಬುಧವಾರ ಹಾಸನದ ಜಿಲ್ಲಾ ಬಿಜೆಪಿ ನಾಯಕರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

ಮಾಜಿ ಶಾಸಕ ಕರೀಗೌಡ ಹಾಗೂ ಬಿಜೆಪಿ ಕಾರ್ಯಕರ್ತರು ಬುಧವಾರ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ ಆಗಲಿದ್ದಾರೆ. ಒಂದು ವರ್ಷದಿಂದ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಕಟ್ಟಾಯ್ಯ ಅಶೋಕ್ ಕೂಡ ಜೆಡಿಎಸ್ ಸೇರಲಿದ್ದಾರೆ. ಈ ಸಂಬಂಧ ಇಂದು ಮಾಜಿ ಶಾಸಕ ಕರೀಗೌಡ ಹಾಗೂ ಕಟ್ಟಾಯ್ಯ ಅಶೋಕ್ ಜಂಟಿ ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ತಿಳಿಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಪ್ರಚಾರದಲ್ಲಿ ನಿರತರಾಗಿದ್ದಾರೆ. ಇತ್ತ ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿರುವ ಎ.ಮಂಜು ಸಹ ಮಾಜಿ ಸಿಎಂ ಸಮ್ಮುಖದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *