ಗರ್ಭಗುಡಿ ಬಾಗಿಲು ಮುರಿದು ದೇವರ ಆಭರಣ ದೋಚಿದ ಕಳ್ಳರು

ಹಾಸನ: ಗರ್ಭಗುಡಿಯ ಬಾಗಿಲು ಮುರಿದ ಕಳ್ಳರು ದೇವರ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಕೋಡಿಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ಗ್ರಾಮದ ಹೊರಭಾಗದಲ್ಲಿ ಇರುವ ಚೋಣುರಯ್ಯ ದೇವಾಲಯದ ಗರ್ಭಗುಡಿಯ ಬಾಗಿಲು ಒಡೆದು ಆಭರಣ ದೋಚಿ ಪರಾರಿಯಾಗಿದ್ದಾರೆ. ಬೆಳಗ್ಗೆ ದೇವಸ್ಥಾನದ ಪೂಜಾರಿಯಾದ ಮಹದೇವ್ ಅವರು ದೇವಾಲಯಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ದೇವಸ್ಥಾನದ ಬೀಗವನ್ನು ಬ್ಲೇಡ್ ಉಪಯೋಗಿಸಿ ಕಟ್ ಮಾಡಿರುವ ಕಳ್ಳರು ನಂತರ ಗರ್ಭಗುಡಿಯ ಬಾಗಿಲನ್ನು ಮುರಿದು ಸುಮಾರು ಒಂದು ಲಕ್ಷ ಬೆಲೆ ಬಾಳುವ ದೇವರ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಇತ್ತೀಚಿಗೆ ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಜಾಸ್ತಿಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *