ಕೊರೊನಾ ರಜೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಪುಂಡಾಟ

ಹಾಸನ: ಮಹಾಮಾರಿ ಕೊರೊನಾ ವೈರಸ್ ಇಡೀ ದೇಶವನ್ನೇ ಬೆಚ್ಚಿಳಿಸಿದೆ. ಆದರೆ ಕಾಲೇಜು ವಿದ್ಯಾರ್ಥಿಗಳು ಮಾತ್ರ ಕೊರೊನಾ ಹಿನ್ನೆಲೆಯಲ್ಲಿ ಸಿಕ್ಕಿರುವ ರಜೆಯಲ್ಲಿ ಮತ್ತೊಬ್ಬರ ಪ್ರಾಣದ ಜೊತೆ ಚೆಲ್ಲಾಟವಾಡಲು ಮುಂದಾಗಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.

ರಾಮನಾಥಪುರದ ಸುಬ್ರಹ್ಮಣ್ಯ ದೇವಸ್ಥಾನದ ದರ್ಶನಕ್ಕೆಂದು ರಾಮನಾಥಪುರ ತಾಲೂಕಿನ ಮೂರು ಕುಟುಂಬಗಳು ಮಂಗಳವಾರ ಸಂಜೆ ಬಂದಿದ್ದವು. ಸಮೀಪದಲ್ಲಿರುವ ಕಾವೇರಿ ಹೊಳೆಯಲ್ಲಿ ಸ್ನಾನ ಮಾಡಲು ಮುಂದಾದಾಗ ಅಲ್ಲಿಗೆ ಅದೇ ಸಮಯಕ್ಕೆ ಬಂದ ಕುಶಾಲನಗರ ಮೂಲದ ಸುಮಾರು ಇಪ್ಪತ್ತು ಮಂದಿ ಕಾಲೇಜು ವಿದ್ಯಾರ್ಥಿಗಳು ಕೂಡ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಈ ವೇಳೆ ಪ್ರವಾಸಕ್ಕೆ ಬಂದಿದ್ದ ಯುವಕರು ಮತ್ತು ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದವರ ನಡುವೆ ಗಲಾಟೆಯಾಗಿದೆ.

ಯುವಕರ ತಂಡವು ರವಿ, ಪ್ರದೀಪ್, ಬಸವರಾಜ್ ಹಾಗೂ ಕಿರಣ್ ಎಂಬವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಎಲ್ಲರನ್ನೂ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *