ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

ಲಕ್ನೋ: ಪಕ್ಷದ ಕಾರ್ಯಕರ್ತರು ದಲಿತರೊಂದಿಗೆ ಚಹಾ ಸೇವಿಸಿ, ಅವರು ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

VOTE

ನಿನ್ನೆ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ( ಇತರೆ ಹಿಂದುಳಿದ ವರ್ಗಗಳ ಸಾಮಾಜಿಕ ಪ್ರತಿನಿಧಿ ಸಮ್ಮೇಳನ ಮತ್ತು ವೈಶ್ಯ ವ್ಯಾಪಾರಿ ಸಮ್ಮೇಳನ)ದಲ್ಲಿ ಭಾಗವಹಿಸಿದ ಸಿಂಗ್, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ನೂರು ದಲಿತರೊಂದಿಗೆ ಚಹಾ ಸೇವಿಸಿ. ಮತ ಚಲಾಯಿಸಬೇಕಿರುವುದು ರಾಷ್ಟ್ರೀಯತೆಯ ಆಧಾರದಲ್ಲಿ. ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಬೇಕು. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ

ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದರು. ಅದರ ಬೆನ್ನಲ್ಲೇ ಸಿಂಗ್ ಈ ಹೇಳಿಕೆ ನೀಡಿದ್ದಾರೆ. 403 ಸದಸ್ಯ ಬಲದ ಉತ್ತರಪ್ರದೇಶ ವಿಧಾನ ಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

Comments

Leave a Reply

Your email address will not be published. Required fields are marked *