ದಯಮಾಡಿ ನಮ್ಮನ್ನ ಊರಿಗೆ ತಲುಪಿಸಿ- ಕೇರಳದಲ್ಲಿ ಸಿಲುಕಿದ ಕಾರ್ಮಿಕರ ಅಳಲು

– ವ್ಯವಸ್ಥೆ ಕಲ್ಪಿಸುವಂತೆ ಸಿಎಂ, ಗೃಹ ಸಚಿವರಿಗೆ ಮನವಿ

ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ.

ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ.

ಹೀಗಾಗಿ ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಮೊಬೈಲ್ ನಲ್ಲಿ ವಿಡಿಯೋ ಮಾಡಿ ಹರಿಬಿಡೋ ಮೂಲಕ ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಊರಿಗೆ ತಲುಪಿಸುವಂತೆ ಕೇಳಿಕೊಳ್ತಿದ್ದಾರೆ.

Comments

Leave a Reply

Your email address will not be published. Required fields are marked *