ಅಂಗಡಿ ಮಾಲೀಕರಿಂದ ಲಾಕ್‍ಡೌನ್ ನಿಯಮ ಉಲ್ಲಂಘನೆ – ವಶಕ್ಕೆ ಪಡೆದು ಕೇಸ್ ಹಾಕಿ ಎಚ್ಚರಿಕೆ

ಹಾವೇರಿ: ಭಾರತ ಲಾಕ್‍ಡೌನ್ ನಿಯಮಕ್ಕೆ ಕ್ಯಾರೇ ಅನ್ನದೆ ಅಂಗಡಿಗಳನ್ನ ತೆರೆದವರಿಗೆ ಹಾವೇರಿಯಲ್ಲಿ ಪೊಲೀಸರು ಬಿಸಿಬಿಸಿ ಕಜ್ಜಾಯ ನೀಡಿ, ಪ್ರಕರಣ ದಾಖಲಿಸುವ ಮೂಲಕ ಖಡಕ್ ಎಚ್ಚರಿಕೆ ನೀಡ್ತಿದ್ದಾರೆ.

ಗುರುವಾರ ಮತ್ತು ಇಂದು ನಗರದ ಹಲವೆಡೆ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಮೊಬೈಲ್, ಪೇಂಟಿಂಗ್, ರೇಡಿಯಂ, ಚಪ್ಪಲಿ ಸೇರಿದಂತೆ ಕೆಲವು ಅಂಗಡಿಗಳ ಬಾಗಿಲು ತೆರೆಯಲಾಗಿತ್ತು. ಇದನ್ನ ಕಂಡು ಗರಂ ಆದ ಪೊಲೀಸರು ಅಂಗಡಿಗಳ ಮಾಲೀಕರಿಗೆ ಲಾಠಿ ರುಚಿ ತೋರಿಸಿ ಬಿಸಿ ಮುಟ್ಟಿಸಿದ್ದಾರೆ.

ಅಂಗಡಿಗಳ ಮುಂದೆ ನೆರೆದಿದ್ದವರು ಸಹ ಪೊಲೀಸರನ್ನ ಕಂಡು ಎದ್ನೋ ಬಿದ್ನೋ ಎಂದು ಓಡಿ ಹೋದರು. ನಂತರ ಅಂಗಡಿಗಳನ್ನ ಬಂದ್ ಮಾಡಿಸಿದ ಪೊಲೀಸರು ರೂಲ್ಸ್ ಬ್ರೇಕ್ ಮಾಡಿ ಅಂಗಡಿಗಳ ಬಾಗಿಲು ತೆರೆದಿದ್ದವರನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇನ್ನು ನಗರದ ಲಕ್ಕಿ ಸೂಪರ್ ಮಾರ್ಕೆಟ್‍ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಅಲ್ಲಿಯೂ ಸಹ ಪೊಲೀಸರು ಬಿಸಿಬಿಸಿ ಕಜ್ಜಾಯ ನೀಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ಕೊಟ್ಟಿದ್ದಾರೆ.

ಅಲ್ಲದೆ ಎಸ್‍ಪಿ ಕೆ.ಜಿ ದೇವರಾಜ್ ಅವರು ನಗರದಲ್ಲಿ ಸಂಚರಿಸಿ ಲಾಕ್‍ಡೌನ್ ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ, ಉಲ್ಲಂಘನೆ ಮಾಡಿದವರ ಮೇಲೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *