ಮಡಿಕೇರಿ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹಮ್ಮದ್(37) ಹಿಮಪಾತಕ್ಕೆ ಸಿಲುಕಿ ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆಯ ಎಒಸಿ ರೆಜಿಮೆಂಟಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಲ್ತಾಫ್ ಅಹಮ್ಮದ್ ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆಯವರಾಗಿದ್ದರು. ಕಳೆದ ಒಂದು ದಶಕದಿಂದ ಇವರ ಪೋಷಕರು ಕೇರಳದ ಮಟ್ಟನ್ನೂರಿನಲ್ಲಿ ನೆಲೆಸಿದ್ದಾರೆ. ಅಲ್ತಾಫ್ ಪತ್ನಿ ವಿರಾಜಪೇಟೆ ಬಳಿಯ ಎಡಪಾಲ ನಿವಾಸಿಯಾಗಿದ್ದಾರೆ. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್ಗೆ ಮೋದಿ ಟಾಂಗ್

ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಅಹಮ್ಮದ್ ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ಮಾಡಿ ಬಳಿಕ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದರು. ಕಳೆದ ಹತ್ತೊಂಬತ್ತು ವರ್ಷಗಳಿಂದ ಅಲ್ತಾಫ್ ಸೈನ್ಯದಲ್ಲಿ ಸೇವೆಸಲ್ಲಿಸುತ್ತಿದ್ದರು. ಇದನ್ನೂ ಓದಿ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ

Leave a Reply