ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!

ಬೆಂಗಳೂರು: ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತೇನೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು `ಅಪ್ರಬುದ್ಧ ಮುಖ್ಯಮಂತ್ರಿ’ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಗಳ ಹೇಳಿಕೆಗೆ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರ ಸಿಗದ್ದಿದ್ದರೆ ನನಗೆ ಜಾಸ್ತಿ ಆಯುಷ್ಯವಿಲ್ಲ, ಸತ್ತೇ ಹೋಗುತ್ತೇನೆ ಎಂದು ಗೋಳಾಡಿಕೊಂಡ ಅಪ್ರಬುದ್ಧ ಮುಖ್ಯಮಂತ್ರಿಗೆ ಫಿಟ್‍ನೆಸ್ ಸವಾಲ್ ಚಾಲೆಂಜ್ ಅನ್ನು ಪ್ರಧಾನಿಯವರು ಸೂಕ್ತವಾಗಿಯೇ ನೀಡಿರುತ್ತಾರೆ. ದೇಹ ಹಾಗು ಮಾನಸಿಕ ಫಿಟ್‍ನೆಸ್ ಇಲ್ಲದವರು ರಾಜ್ಯದ ಕಾಳಜಿ ಬಗ್ಗೆ ಮಾತನಾಡುವುದು ಶುದ್ಧ ಹಾಸ್ಯಾಸ್ಪದ ಎಂದು ಬರೆದು ಟಾಂಗ್ ನೀಡಿದ್ದಾರೆ.

ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುವ ಮುಖ್ಯಮಂತ್ರಿಗಳು, ಬೆಂಗಳೂರಿನ ಗುಂಡಿ ಭಾಗ್ಯ ನೀಡಿದ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ಮಾಡುವ ಸಾಹಸಕ್ಕೆ ಕೈ ಹಾಕುತ್ತೀರಾ? ಎಂದು ಬಿಜೆಪಿಯ ಮಲ್ಲೇಶ್ವರಂ ಶಾಸಕ ಅಶ್ವತ್ ನಾರಾಯಣ್ ರವರು ಮುಖ್ಯಮಂತ್ರಿಗೆ ಹಾಕಿದ್ದ ಟ್ವೀಟ್ ಅನ್ನು ಅನಂತಕುಮಾರ್ ಹೆಗಡೆಯವರು ರೀ ಟ್ವೀಟ್ ಮಾಡಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸವಾಲಿಗೆ ಟಾಂಗ್ ನೀಡಿ ಉತ್ತರ ಕೊಟ್ಟ ಎಚ್‍ಡಿಕೆ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಫಿಟ್ ನೆಸ್ ವಿಡಿಯೋವನ್ನು ಟ್ವೀಟ್ ಮಾಡಿ ಕುಮಾರಸ್ವಾಮಿಯವರಿಗೆ ಚಾಲೆಂಜ್ ಹಾಕಿದ್ದರು.

Comments

Leave a Reply

Your email address will not be published. Required fields are marked *