ಎಚ್‍ಡಿ ರೇವಣ್ಣ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಅಮವಾಸೆ ಪೂಜೆ

ಮಂಡ್ಯ: ಎಚ್‍ಡಿ ರೇವಣ್ಣ ಅವರು ಪತ್ನಿ ಭವಾನಿ ಸಮೇತರಾಗಿ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸೆ ಪೂಜೆ ಸಲ್ಲಿಸಿದ್ದಾರೆ.

ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಯವರೇ ಪೂಜಾ ಕಾರ್ಯ ನಡೆಸಿಕೊಟ್ಟಿದ್ದಾರೆ. ಆದಿಚುಂಚನಗಿರಿಗೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿ ಸೇರಿದಂತೆ ಕ್ಷೇತ್ರಾದಿ ದೇವತೆಗಳಿಗೆ ಸತತ ಮೂರು ಬಾರಿ ವಿಶೇಷ ಅಮವಾಸೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಸುತ್ತೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ ಸಮೇತರಾಗಿ ಆಗಮಿಸಿ ಆದಿಚುಂಚನಗಿರಿ ಕಾಲಭೈರವೇಶ್ವರ ಸ್ವಾಮಿಗೆ ಸತತ ಮೂರು ಬಾರಿ ಅಮವಾಸೆ ಪೂಜೆ ಸಲ್ಲಿಸಿದರು.

ರಾಜ್ಯದ ಜನರ ಒಳಿತಿಗೆ ಮತ್ತು ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಶಕ್ತಿ ನೀಡುವಂತೆ ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸಿದ್ದಾರೆ. ಇದೀಗ ಎಚ್‍ಡಿ.ರೇವಣ್ಣ ಅವರೂ ಕೂಡ ಸತತ ಎರಡನೇ ಬಾರಿ ಅಮವಾಸೆ ಪೂಜೆಯಲ್ಲಿ ಪಾಲ್ಗೊಂಡಿದ್ದು ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

Comments

Leave a Reply

Your email address will not be published. Required fields are marked *