ಸೂಪರ್ ಸಿಎಂ ವರ್ಗಾವಣೆ ದಂಧೆ ಎಂದ ಬಿಜೆಪಿಗೆ ತಿರುಗೇಟು ನೀಡಲು ರೇವಣ್ಣ ಪ್ಲಾನ್

ಬೆಂಗಳೂರು: ಸೂಪರ್ ಸಿಎಂ ವರ್ಗಾವಣೆ ದಂಧೆ ಎಂದು ಆರೋಪ ಮಾಡಿದ್ದ ಬಿಜೆಪಿಗೆ ಲೋಕೋಪಯೋಗಿ ಎಚ್.ಡಿ. ರೇವಣ್ಣ ತಿರುಗೇಟು ನೀಡುವುದಕ್ಕೆ ಮುಂದಾಗಿದ್ದಾರೆ.

ರೇವಣ್ಣ ತಾವು ಸಚಿವರಾದ ನಂತರ ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆಗೆ ಶಿಫಾರಸ್ಸು ಮಾಡಿದ ಶಾಸಕರುಗಳ ಪತ್ರದ ಬುಕ್‍ಲೆಟ್ ರೆಡಿ ಮಾಡಿದ್ದಾರೆ. ಯಾರೆಲ್ಲಾ ಬಿಜೆಪಿ ನಾಯಕರು ವರ್ಗಾವಣೆ ಶಿಫಾರಸ್ಸು ಮಾಡಿದ್ದಾರೆ ಎಂಬ ಬಗ್ಗೆ ದಾಖಲೆ ರಿಲೀಸ್ ಮಾಡಲು ಈಗ ರೇವಣ್ಣ ಸಿದ್ಧವಾಗಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಲೋಕೋಪಯೋಗಿ ಇಲಾಖೆಯಲ್ಲಿ 270 ಕ್ಕೂ ಹೆಚ್ಚು ವರ್ಗಾವಣೆ ಸಹ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಒಂದರಲ್ಲೇ ವರ್ಗಾವಣೆ ಸಂಬಂಧ ಸುಮಾರು 500ಕ್ಕೂ ಹೆಚ್ಚು ಶಿಫಾರಸ್ಸು ಪತ್ರಗಳು ಬಂದಿದ್ದವು. ಅದರಲ್ಲಿ ಬಿಜೆಪಿ ಶಾಸಕರ ಶಿಫಾರಸ್ಸು ಎಷ್ಟು? ಜೆಡಿಎಸ್ ಶಾಸಕರ ಶಿಫಾರಸ್ಸು ಎಷ್ಟು? ಮತ್ತು ಕಾಂಗ್ರೆಸ್ ಶಾಸಕರ ಶಿಫಾರಸ್ಸು ಎಷ್ಟು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ರೇವಣ್ಣ ಮುಂದಾಗಿದ್ದಾರೆ.

ಒಂದು ವೇಳೆ ಮುಂದೆ ರಾಜಕೀಯ ಪ್ರೇರಿತ ಆರೋಪ ಮಾಡಿದರೆ ರೇವಣ್ಣ ದಾಖಲೆ ಬಿಡುಗಡೆಗೆ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ವರ್ಗಾವಣೆ ದಂಧೆ ಅಂತ ಆರೋಪಿಸಿದರೂ ದಾಖಲೆಗಳನ್ನು ಬಿಡುಗಡೆ ಮಾಡುತ್ತೀನಿ. ಬಿಎಸ್‍ವೈ, ಈಶ್ವರಪ್ಪ ಸೇರಿದಂತೆ ಬಿಜೆಪಿಯ ಘಟಾನುಘಟಿಗಳ ಶಿಫಾರಸ್ಸು ಪತ್ರವು ಅದರಲ್ಲಿದೆ. ಶಿಫಾರಸ್ಸು ಮಾಡುತ್ತಾರೆ, ಟ್ರಾನ್ಸ್ ಫರ್ ಮಾಡಿಸುತ್ತಾರೆ. ಆರೋಪ ಮಾತ್ರ ನನ್ನ ಮೇಲೆ ಮಾಡುತ್ತಾರೆ. ಅವರಿಗೆ ದಾಖಲೆ ಕೊಡುತ್ತೀನಿ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ರೇವಣ್ಣ ತಿರುಗೇಟು ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ರೇವಣ್ಣ ಸೂಪರ್ ಸಿಎಂ ಅಧಿಕಾರ ಚಲಾಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ವರ್ಗಾವಣೆ ದಂಧೆಯನ್ನು ಮಾಡುತ್ತಿದ್ದಾರೆ ಎಂದು ಈ ಹಿಂದೆ ಯಡಿಯೂರಪ್ಪ ಆರೋಪಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *