ಎಚ್‍ಡಿಡಿಗೆ ಗಂಗೆ ಶಾಪವಿದ್ದು, ತುಮಕೂರಿನಿಂದ ಸ್ಪರ್ಧೆ ಮಾಡಿದ್ರೆ ಸೋಲು ಗ್ಯಾರಂಟಿ: ಮಾಜಿ ಶಾಸಕ

ತುಮಕೂರು: ಮಾಜಿ ಪ್ರಧಾನಿ ದೇವೇಗೌಡರಿಗೆ ಗಂಗೆ ಶಾಪ ಇದ್ದು ತುಮಕೂರಿನಿಂದ ಅವರು ಸ್ಪರ್ಧೆ ಮಾಡಿದರೆ ಅವರ ಸೋಲು ಗ್ಯಾರಂಟಿ ಎಂದು ತುಮಕೂರು ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮಾಜಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸುರೇಶ್ ಗೌಡರು, ದೇವೇಗೌಡರಿಗೆ ಗಂಗೆ ಶಾಪ ಇರೋದಾಗಿ ಈಗಾಗಲೇ ಜ್ಯೋತಿಷಿಗಳು ಹೇಳಿದ್ದಾರೆ. ಈ ವಿಚಾರ ಸ್ವತಃ ದೇವೇಗೌಡರಿಗೆ ಗೊತ್ತು. ಈ ಶಾಪ ಹೊತ್ತುಕೊಂಡು ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಅವರ ಸೋಲು ಕಟ್ಟಿಟ್ಟ ಬುತ್ತಿ ಎಂದು ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ.

ತುಮಕೂರು ಜಿಲ್ಲೆಗೆ ಹೇಮಾವತಿ ನೀರು ನೀಡದೆ ದೇವೇಗೌಡರು ವಂಚಿಸಿದ್ದಾರೆ. ಲಕ್ಷಾಂತರ ರೈತರ ಕಣ್ಣೀರ ಶಾಪದಿಂದಾಗಿ ಮಾತೆ ಗಂಗೆ ದೇವೇಗೌಡರ ಮೇಲೆ ಶಾಪ ಕೊಟ್ಟಿದ್ದಾಳೆ. ಹಾಗಾಗಿ ತೂಮಕೂರಿನಿಂದ ಸ್ಪರ್ಧೆ ಮಾಡಿದರೆ ಶಾಪದಿಂದಾಗಿ ಅವರ ಸೋಲು ಗ್ಯಾರಂಟಿ ಎಂದು ಸುರೇಶ್ ಗೌಡ ಹೇಳಿದ್ದಾರೆ.

ಅಲ್ಲದೆ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ಸಂಭಾವ್ಯ ಅಭ್ಯರ್ಥಿ ಪಟ್ಟಿಯ ನನ್ನ ಹೆಸರೂ ಇದೆ. ಸಾಮಾಜಿಕ ಜಾಲತಾಣದಲ್ಲಿ ನಡೆದ ಸರ್ವೆಯಲ್ಲಿ ನನ್ನ ಪರ ಒಲವು ತೋರಿದ್ದಾರೆ. ಅದರ ಜೊತೆಗೆ ನಾನು ಯಡಿಯೂರಪ್ಪ ನವರ ಶಿಷ್ಯ ಎನ್ನುವುದು ಜನರಿಗೆ ಗೊತ್ತು. ಹಾಗಾಗಿ ಟಿಕೆಟ್ ತಮಗೇ ಅಂತಿಮವಾಗುತ್ತೆ ಎಂದು ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *