ಧಾರವಾಡದಲ್ಲಿ ಭಾರೀ ಗಾಳಿ: ಹಾರಿ ಹೋದ 10 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮದಲ್ಲಿ ಭಾರಿ ಗಾಳಿಗೆ 10ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣೆಗಳು ಹಾರಿಹೋಗಿವೆ.

ಇಂದು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಗಾಳಿ ಬೀಸಿದ್ದರಿಂದ ಮನೆಯ ತಗಡಿನ ಮೇಲ್ಛಾವಣಿಗಳು ಹಾರಿಹೋಗಿವೆ. ವಾಸವಿದ್ದ ಮನೆಗಳ ಮೇಲ್ಛಾವಣೆಯ ತಗಡುಗಳು ಹಾರಿದ್ದರಿಂದ ಗ್ರಾಮದ ಜನರು ಬಯಲಲ್ಲಿ ಕೂರುವಂತಾಗಿದೆ. ಗ್ರಾಮದ ಕೆಲ ಮನೆಗಳ ಹೆಂಚುಗಳು ಸಹ ಭಾರೀ ಗಾಳಿಗೆ ಹಾರಿವೆ.

ಇನ್ನು ಧಾರವಾಡ ನಗರದ ಮಂಗಳವಾರಪೇಟೆಯಲ್ಲಿ ಯಂಡಿಗೇರಿ ಎಂಬವರ ಮನೆಯ ಆವರಣದಲ್ಲಿಯ ತೆಂಗಿನ ಮರಕ್ಕೆ ಸಿಡಲು ತಾಗಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ತೆಂಗಿನ ಮರಕ್ಕೆ ತಗುಲಿದ್ದ ಬೆಂಕಿಯನ್ನು ನಂದಿಸಿದ್ದಾರೆ.

 

Comments

Leave a Reply

Your email address will not be published. Required fields are marked *