ರಾಯಚೂರಿನಲ್ಲಿ ಧಾರಾಕಾರ ಮಳೆ- ಅಪಾರ ಪ್ರಮಾಣದ ಈರುಳ್ಳಿ ನೀರು ಪಾಲು

ರಾಯಚೂರು: ಜಿಲ್ಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ಭಾರೀ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈರುಳ್ಳಿ ಸೇರಿದಂತೆ ದವಸ ಧಾನ್ಯಗಳು ನೀರು ಪಾಲಾಗಿವೆ.

ನೀರಿನಲ್ಲಿ ಹರಿದು ಹೋಗುತ್ತಿದ್ದ ಈರುಳ್ಳಿಯನ್ನ ಬಟ್ಟೆಯಲ್ಲಿ ಹಿಡಿದು ಉಳಿಸಿಕೊಳ್ಳಲು ರೈತರು ಪರದಾಡಿರು. 70 ಸಾವಿರಕ್ಕೂ ಹೆಚ್ಚು ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ. ಉಳಿದಂತೆ ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *