ಉಡುಪಿಯಲ್ಲಿ ಮುಂಗಾರು ಮಳೆ ಅಬ್ಬರ- ಬೆಳಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ತನ್ನ ಅಬ್ಬರ ತೋರಿದೆ. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಬಿರುಸಿನ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಮತ್ತು ಕಾರ್ಕಳ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದೆ.

ಕಳೆದ ಒಂದು ತಿಂಗಳಿನಿಂದ ಮುಂಗಾರು ಬ್ರೇಕ್ ಕೊಟ್ಟಿತ್ತು. ಕರಾವಳಿ ಜಿಲ್ಲೆ ಉಡುಪಿ ಬೇಸಿಗೆ ಕಾಲಕ್ಕೆ ತಿರುಗಿತ್ತು. ಆದ್ರೆ ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ವಾತಾವರಣ ಸಂಪೂರ್ಣ ತಂಪಾಗಿದೆ. ಮೋಡ ಮುಸುಕಿದ ವಾತಾವರಣವಿದ್ದು ದಿನಪೂರ್ತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಸಮುದ್ರದಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿದ್ದು- ಮೀನುಗಾರರಿಗೆ ಜಿಲ್ಲಾಡಳಿತದಿಂದ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಿದೆ. ರಸ್ತೆಯಲ್ಲಿ ಮಳೆನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಭತ್ತದ ಬೆಳೆಗೆ ಈ ಮಳೆ ಬಹಳ ಉಪಯುಕ್ತವಾಗಿದ್ದು- ಗದ್ದೆಗೆ ನೀರು ಹಾಯಿಸುವುದರಿಂದ ರೈತರು ಪಾರಾಗಿದ್ದಾರೆ.

Comments

Leave a Reply

Your email address will not be published. Required fields are marked *