ಬೆಂಗ್ಳೂರಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ- ಟ್ರಾಫಿಕ್‍ನಲ್ಲಿ ಸಿಕ್ಕಿ ಸುಸ್ತಾದ ಪ್ರಯಾಣಿಕರು

ಬೆಂಗಳೂರು: ನಗರದಲ್ಲೆಡೆ ವರುಣ ದೇವ ತನ್ನ ಆರ್ಭಟ ಮುಂದುವರೆಸಿದ್ದಾನೆ. ಭಾರೀ ಮಳೆಯಿಂದಾಗಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್‍ನಲ್ಲಿ ಪ್ರಯಾಣಿಕರು ಸಿಲುಕಿ ಸುಸ್ತಾಗಿದ್ದಾರೆ.

ನಗರದ ಚಾಮರಾಜಪೇಟೆ, ಬಸವನಗುಡಿ, ಬನಶಂಕರಿ, ಯಶವಂತಪುರ, ಮಲ್ಲೇಶ್ವರ, ಹೆಬ್ಬಾಳ, ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆಯಾಗುತ್ತಿದೆ. ಶಿವಾನಂದ ಸರ್ಕಲ್ ಬಳಿಯ ಅಂಡರ್ ಪಾಸ್‍ನಲ್ಲಿ ಕಾರೊಂದು ಮುಳುಗಡೆಯಾಗಿದೆ.

ರಾಜಾಜಿನಗರ ಮತ್ತು ಹೊಸಕೆರೆಹಳ್ಳಿಯ ತಗ್ಗು ಪ್ರದೇಶಗಳಿಗೆ ನೀರು ನುಗಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರುಬ ಹೊರವಲಯ ನೆಲಮಂಗಲ ಬಳಿಯೂ ಗಾಳಿ ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕಳೆದ ಕೆಲವು ದಿನಗಳಿಂದ ನೆಲಮಂಗಲ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

 

Comments

Leave a Reply

Your email address will not be published. Required fields are marked *