ಕೊಪ್ಪಳದಲ್ಲಿ ಭಾರೀ ಮಳೆ-ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದ ಬೈಕ್ ಸವಾರರಿಬ್ಬರ ರಕ್ಷಣೆ

ಕೊಪ್ಪಳ: ಶನಿವಾರ ಸಂಜೆ ರಾಜ್ಯಾದ್ಯಂತ ಮಳೆಯಾಗಿದ್ದು, ಕೆಲವಡೆ ಜನಜೀವನ ಸಹ ಅಸ್ತವ್ಯಸ್ತಗೊಂಡಿದೆ. ಕೊಪ್ಪಳದ ಕುಕನೂರು ಗ್ರಾಮದಲ್ಲಿ ಸುರಿದ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬೈಕ್ ಸವಾರರನ್ನು ರಕ್ಷಣೆ ಮಾಡಲಾಗಿದೆ.

ಗುದ್ನೆಪ್ಪ ಮತ್ತು ಕಳಕಗೌಡ ಎಂಬ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಹಳ್ಳದ ಪಕ್ಕ ನಿರ್ಮಾಣವಾಗುತ್ತಿದ್ದ ಸೇತುವೆಯ ಪಿಲ್ಲರ್ ಮೇಲೆ ಕುಳಿತು ಸಹಾಯಕ್ಕಾಗಿ ಇಬ್ಬರೂ ಕೂಗಿಕೊಂಡಿದ್ದಾರೆ. ಇಬ್ಬರು ಕಿರುಚಾಡುವ ಶಬ್ಧ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ.

Comments

Leave a Reply

Your email address will not be published. Required fields are marked *