ಮಳೆಯಿಂದಾಗಿ ಕೆರೆಯಂತಾದ ಮಂಡ್ಯದ ಕೆಆರ್ ಪೇಟೆ ಬಸ್ ನಿಲ್ದಾಣ

ಮಂಡ್ಯ: ರಾಜ್ಯಾದ್ಯಂತ ಮಳೆರಾಯ ತನ್ನ ಅಬ್ಬರ ಮುಂದುವರೆಸಿದ್ದು ಹಲವು ಜಿಲ್ಲೆಗಳು ತತ್ತರಿಸಿವೆ. ಅದರಂತೆ ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಮಳೆರಾಯ ತನ್ನ ಅಬ್ಬರ ತೋರಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸಂಪೂರ್ಣ ಕೆರೆಯಾಗಿದೆ.

ಹೌದು. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ನೀರು ನುಗ್ಗಿದ್ದು ಸಂಪೂರ್ಣ ಕೆರೆಯಂತಾಗಿ ಮಾರ್ಪಡಾಗಿದೆ. ಇದರಿಂದ ಸರ್ಕಾರಿ ಬಸ್‍ನ ಚಾಲಕರು ಸೇರಿದಂತೆ ಹಲವು ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ.

ಸತತ ಮಳೆಯಿಂದಾಗಿ ನಗರದ ತಗ್ಗು ಪ್ರದೇಶದಲ್ಲಿರುವ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡು ಅವಾಂತರ ಸೃಷ್ಟಿ ಮಾಡಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ತಾಲೂಕಿನ ದೇವೀರಮ್ಮಣ್ಣ ಕೆರೆ ಹಾಗೂ ಹೊಸಹೊಳಲು ದೊಡ್ಡ ಕೆರೆ ತುಂಬಿ ಹರಿಯುತ್ತಿದೆ. ಇದ್ರಿಂದ ಸಂತಸಗೊಂಡ ಸ್ಥಳೀಯರು ಕೆರೆಗೆ ಪೂಜೆ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *