ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆ ಕೊಚ್ಚಿಹೋಯ್ತು ರಸ್ತೆ

– ಸಿಡಿಲಿಗೆ ಯುವಕ ಬಲಿ

ಉಡುಪಿ: ಜಿಲ್ಲೆಯ ಹಿರಿಯಡ್ಕ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಕುಸಿದಿದೆ. ಉಡುಪಿಯಲ್ಲಿ ಸಂಜೆಯ ವೇಳೆಗೆ ಏಕಾಏಕಿ ಧಾರಾಕಾರ ಮಳೆಯಾಗಿದ್ದು ಭೂಮಿ ಕುಸಿದು, ರಸ್ತೆ ಕೊಚ್ಚಿಹೋಗಿದೆ.

ಜಿಲ್ಲೆಯಾದ್ಯಂತ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯಾಗಿದ್ದೆದು, ಮಳೆಯ ಅಬ್ಬರಕ್ಕೆ ಪೆರ್ಡೂರು- ಹರಿಖಂಡಿಗೆ ಸಂಪರ್ಕ ರಸ್ತೆ ಕುಸಿದಿದೆ. ಜನ ನೋಡ ನೋಡುತ್ತಿದಂತೆ ಗದ್ದೆ ಪಕ್ಕದ ಭೂಮಿ ಕುಸಿದಿದ್ದು, ರಸ್ತೆ ಕೊಚ್ಚಿಕೊಂಡು ಹೋಗಿದೆ. ಭೂಮಿ ತೇವಗೊಂಡು ಕುಸಿದಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಕಳೆದ ಬೇಸಿಗೆಯಲ್ಲಿ ಈ ರಸ್ತೆಗೆ ಡಾಂಬರೀಕರಣ ನಡೆದಿದ್ದು, ರಸ್ತೆ ಸಮೇತ ಭೂಮಿ ಕೊಚ್ಚಿಕೊಂಡು ಹೋಗಿದೆ. ಸುಮಾರು ಒಂದು ಗಂಟೆ ಸುರಿದ ಮಳೆಗೆ ಕೆಲವೆಡೆ ಭತ್ತದ ಬೆಳೆ ಕೊಚ್ಚಿಕೊಂಡು ಹೋಗಿದೆ.

ಸಿಡಿಲಿಗೆ ಯುವಕ ಬಲಿ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹುಗುಲೂರಿನಲ್ಲಿ ಸಿಡಲು ಬಡಿದು ಯುವಕ ಸಾವನ್ನಪ್ಪಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಹ್ಮದ್ ರಫೀ (24) ಮೃತ ದುರ್ದೈವಿಯಾಗಿದ್ದು, ಸಂಜೆ ಗುಡುಗು ಸಹಿತ ಸುರಿದ ಮಳೆಯಿಂದ ತಪ್ಪಸಿಕೊಳ್ಳಲು ಮರದಡಿ ನಿಂತ ಸಂದರ್ಭದಲ್ಲಿ ಸಿಡಲು ಬಡಿದಿದೆ. ಘಟನೆ ಹೂವಿನ ಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *