ಚಾರ್ಮಾಡಿ ಘಾಟ್ ತಿರುವಿನಲ್ಲಿ ಲಾರಿ ಪಲ್ಟಿ- ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಟ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ಘಟನೆ ಶನಿವಾರ ರಾತ್ರಿ ಸಂಭವಿಸಿದ್ದು, ಇಂದು ಬೆಳಗ್ಗೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಪರಿಣಾಮ ಎಲ್ಲಾ ವಾಹನಗಳು ನಿಂತಲ್ಲೆ ನಿಂತಿವೆ. ಲಾರಿ ಶಿರಾಡಿ ಘಾಟ್ ಬಂದ್ ಹಿನ್ನೆಲೆ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು, ಧರ್ಮಸ್ಥಳಕ್ಕೆ ಸಂಚಾರ ಮಾಡುತ್ತಿತ್ತು. ರಾತ್ರಿ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಈ ಅಪಘಾತದಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಮಾರ್ಗದಲ್ಲಿ ಅತಿಯಾದ ಮಂಜಿನಿಂದ ವಾಹನ ಸವಾರರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗ ಲಾರಿ ಪಲ್ಟಿಯಾದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹೀಗಾಗಿ ಕೆಲ ಕಾಲ ಪ್ರಯಾಣಿಕರು ಮತ್ತು ಪ್ರವಾಸಿಗರು ಪರದಾಡಿದ್ದಾರೆ.

ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *