ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ನಿಂದ ನೋಟಿಸ್

ಹಾಸನ: ಬಿಎಂ ರಸ್ತೆ ಅಗಲೀಕರಣ ವಿಚಾರವಾಗಿ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗೆ ಹೈಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ.

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಬಿಎಂ ರಸ್ತೆಯಲ್ಲಿ ಕೆಲವು ಕಟ್ಟಡಗಳಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಜಿಲ್ಲಾಡಳಿತ ಕಟ್ಟಡಗಳನ್ನು ತೆರವುಗೊಳಿಸಿತ್ತು. ಈ ಕುರಿತು ಸುಧಾ ಮತ್ತು ಶಶಿಕಾಂತ್ ಎಂಬವರು ಹೈಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರವಿಮಳಿಮಠ್ ಮತ್ತು ಬಿ.ಎಂ. ಶ್ಯಾಮ್ ಪ್ರಸಾದ್‍ರ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಿದೆ.

ಕಳೆದ ತಿಂಗಳು ಬೆಂಗಳೂರು ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಎಂ ರಸ್ತೆಯಲ್ಲಿನ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸಿತ್ತು. ಜಿಲ್ಲಾಡಳಿತ ಸುಧಾ ಮತ್ತು ಶಶಿಕಾಂತ್ ಎಂಬವರಿಗೆ ಸೇರಿದ್ದ ಕಟ್ಟಡವನ್ನು 7.2 ಮೀಟರ್ ವರೆಗೆ ತೆರವುಗೊಳಿಸಿತ್ತು. ಕಾನೂನು ನಿಯಮಗಳನ್ನು ಪಾಲಿಸದೇ ಕಟ್ಟಡ ತೆರವುಗೊಳಿಸಲಾಗಿದೆ ಎಂದು ಕಟ್ಟಡ ಮಾಲೀಕರು ಕೇಸ್ ದಾಖಲಿಸಿದ್ದರು. ಹೀಗಾಗಿ ಹಾಸನ ಜಿಲ್ಲಾಧಿಕಾರಿ ಮತ್ತು ನಗರಸಭೆ ಆಯುಕ್ತರಿಗೆ ನಿಖರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *