ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ 20ರಿಂದ 22ರವರೆಗೆ 200 ಮಿಮೀ ಮಳೆ ಆಗುತ್ತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶನಿವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. ಅಲ್ಲದೆ ತುರ್ತು ನಿರ್ವಹಣಾ ಪಡೆಗೆ ಅಲರ್ಟ್ ಇರುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ ಕರಾವಳಿಯಲ್ಲಿ ಮಳೆ ಬಿರುಸು ಪಡೆದಿದ್ದು ಮಂಗಳೂರು ನಗರದ ವಿವಿಧೆಡೆ ಮಳೆ ನೀರು ಅವಾಂತರ ಸೃಷ್ಟಿಸಿದೆ. ಚರಂಡಿ ಬ್ಲಾಕ್ ಆಗಿ ಮಳೆ ನೀರು ಹರಿಯಲು ಸಾಧ್ಯವಾಗದೆ ಮಂಗಳೂರು ರೈಲು ನಿಲ್ದಾಣಕ್ಕೂ ನೀರು ನುಗ್ಗಿದೆ. ರೈಲು ನಿಲ್ದಾಣದ ಮುಂಭಾಗದಲ್ಲಿ ಕಾಮಗಾರಿ ನಡೆಯುತಿದ್ದ ಹಿನ್ನೆಲೆಯಲ್ಲಿ ಚರಂಡಿ ಬ್ಲಾಕ್ ಆಗಿತ್ತು. ಗುರುವಾರ ಒಂದೇ ಸಮನೆ ಸುರಿದ ಮಳೆಗೆ ನೀರು ರೈಲು ನಿಲ್ದಾಣದ ಒಳಗೆ ನುಗ್ಗಿದೆ. ಟಿಕೆಟ್ ಕೌಂಟರ್ ನಲ್ಲಿ ನೀರು ನಿಂತ ದೃಷ್ಯ ಅಲ್ಲಿನ ದಯನೀಯ ಸ್ಥಿತಿಯನ್ನು ತೋರಿಸುತ್ತಿದೆ.

Comments

Leave a Reply

Your email address will not be published. Required fields are marked *