ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ- ಕೆಎಂಸಿ ಹೆಲ್ತ್ ಬುಲೆಟಿನ್ ರಿಲೀಸ್

ಉಡುಪಿ: ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಮಣಿಪಾಲದ ಹಿರಿಯ ವೈದ್ಯೆ ಡಾ. ಸುಧಾ ವಿದ್ಯಾಸಾಗರ್ ಹೇಳಿದ್ದಾರೆ.

ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅವರು, ಉಸಿರಾಟದ ಸಮಸ್ಯೆಯಿಂದ ಸ್ವಾಮೀಜಿ ಕೆಎಂಸಿಗೆ ಬೆಳಗ್ಗೆ ದಾಖಲಾಗಿದ್ದರು. ಈಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವಾಗ ಬಹಳ ಸಮಸ್ಯೆಯಿತ್ತು ಎಂದು ಹೇಳಿದರು.

ಶ್ರೀಗಳಿಗೆ ವೆಂಟಿಲೇಟರ್ ಅಳವಡಿಸಿದ್ದೇವೆ, ಚೇತರಿಸಿಕೊಳ್ಳಲು ಮದ್ದುಗಳನ್ನು ಹಾಕಿರುವುದರಿಂದ ಅಮಲಿನಲ್ಲಿದ್ದಾರೆ ಎಂದು ಡಾ. ಸುಧಾ ವಿದ್ಯಾಸಾಗರ್ ಹೇಳಿದರು.

ಪೇಜಾವರ ಶ್ರೀಗಳಿಗೆ ಕೆಎಂಸಿಯ ಆರು ತಜ್ಞ ವೈದ್ಯರಿಂದ ಚಿಕಿತ್ಸೆ ಸಿಗುತ್ತಿದೆ. ಡಾ. ಸುಧಾ ವಿದ್ಯಾಸಾಗರ್ ವೈದ್ಯರ ತಂಡದ ನೇತೃತ್ವ ವಹಿಸಿದ್ದು, ರವಿರಾಜ್ ಆಚಾರ್ಯ, ಡಾ. ಶ್ವೇತಪ್ರಿಯ, ಡಾ. ಮಂಜುನಾಥ ಹಂದೆ, ಡಾ. ಪದ್ಮಕುಮಾರ್, ಡಾ. ವಿಶಾಲ್ ಶಾನುಭೋಗ್ ಅವರು 24 ಗಂಟೆ ನಿಗಾ ವಹಿಸಲಿದ್ದಾರೆ. ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಶ್ರೀಗಳ ಚಿಕಿತ್ಸೆಯ ಸಂಪೂರ್ಣ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತಿದ್ದಾರೆ.

Comments

Leave a Reply

Your email address will not be published. Required fields are marked *