ಐಟಿ ರೈಡ್ ಮಾಹಿತಿ ಸುಳಿವು ಬಿಜೆಪಿ ಬೆಂಬಲ ಅಭ್ಯರ್ಥಿಗೆ ಗೊತ್ತಾಗಿದ್ದು ಹೇಗೆ – ಸಿಎಂ ಎಚ್‍ಡಿಕೆ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಇಂದು ಹಲವೆಡೆ ನಡೆದಿರುವ ಐಟಿ ಅಧಿಕಾರಿಗಳ ದಾಳಿಯ ಬಗ್ಗೆ ಮಂಡ್ಯ ಬಿಜೆಪಿ ಬೆಂಬಲ ಅಭ್ಯರ್ಥಿಗೆ ಮಾಹಿತಿ ಹೇಗೆ ಲಭಿಸಿತ್ತು ಎಂದು ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದು, ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ಐಟಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಿನ್ನೆ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ಅಭ್ಯರ್ಥಿ ಮಧ್ಯಾಹ್ನ ಐಟಿ ದಾಳಿಯ ಬಗ್ಗೆ ಮಾತನಾಡಿ ಕೆಲವೇ ಕ್ಷಣಗಳಲ್ಲಿ ಐಟಿ ದಾಳಿಯಾಗುತ್ತೆ ಎಂದು ಹೇಳಿದ್ದಾರೆ. ಇತ್ತ ಸಂಜೆಯಾಗುತ್ತಿದಂತೆ ಕೇಂದ್ರದ ಐಟಿ ಅಧಿಕಾರಿಗಳು ದಾಳಿಗೆ ಸಿದ್ಧರಾಗುತ್ತಾರೆ. ಅವರಿಗೆ ಈ ಬಗ್ಗೆ ಮಾಹಿತಿ ಹೇಗೆ ಲಭಿಸಿತ್ತು ಎಂದು ಪ್ರಶ್ನೆ ಮಾಡಿದರು.

ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಇಂತಹ ದಾಳಿಗೆ ಹೆದುರುವವರು ನಾವಲ್ಲಾ. ಐಟಿ ದಾಳಿಯ ಬಗ್ಗೆ ನಮ್ಮ ವಿರೋಧವಿಲ್ಲ. ಕೆಲವೇ ಕೆಲವು ಪಕ್ಷದ ಮುಖಂಡರು, ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡುತ್ತಿರುವುದು ಸರಿಯಲ್ಲ. ಆದರೆ ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿ ನಡೆದಿಲ್ಲ. ಅವರೆಲ್ಲಾ ಸಾಚಗಳಾ? ಐಟಿ ಇಲಾಖೆಯ ಅಧಿಕಾರಿಯೊಬ್ಬರು ಮುಂಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸಂಪಾದನೆ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಐಟಿ ಅಧಿಕಾರಿಗಳು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುವುದನ್ನು ಬಿಡಬೇಕು ಎಂದು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದರು.

ಸುಮಲತಾ ಹೇಳಿದ್ದೇನು?
ಯಾರು ಸಾವಿರ ಕೋಟಿ, ಕೋಟಿ ಹಣ ಮಾಡಿಕೊಂಡಿದ್ದಾರೆ ಎಂಬುವುದರ ಬಗ್ಗೆ ಕೇಂದ್ರಕ್ಕೆ ಗೊತ್ತಿದೆ. ಅವರಿಗೆ ತಕ್ಕ ನ್ಯಾಯ ಸಿಗುತ್ತೆ. ಸ್ವಲ್ಪ ಕಾದು ನೋಡೋಣ ಎಂದು ಮಂಡ್ಯದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ ಸುಮಲತಾ ಹೇಳಿದ್ದರು.

Comments

Leave a Reply

Your email address will not be published. Required fields are marked *