ಚುನಾವಣೆಗೆ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಎಂಟ್ರಿ

ಬೆಂಗಳೂರು: ನಟ ಹುಚ್ಚ ವೆಂಕಟ್ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಚ್ಚ ವೆಂಕಟ್, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು. ಅಲ್ಲದೇ ಚುನಾವಣೆಯಲ್ಲಿ ಯಾವುದೇ ಪಕ್ಷದಿಂದ ಟಿಕಟ್ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದರು.

ಚುನಾವಣೆಯ ಪ್ರಚಾರ ಕಾರ್ಯವನ್ನು 5 ದಿನಗಳಲ್ಲಿ ಆರಂಭಿಸುತ್ತೇನೆ, ಮತದಾರರು ಕೇವಲ ಕುಕ್ಕರ್ ಇತರೇ ಅಮಿಷಗಳಿಗೆ ಒಳಗಾಗಿ ಮತವನ್ನು ಮಾರಾಟ ಮಾಡಬೇಡಿ ಎಂದು ಹೇಳಿದರು.

Comments

Leave a Reply

Your email address will not be published. Required fields are marked *