ಪತ್ನಿಯನ್ನು ಕೊಲೆ ಮಾಡಿ ಅಪರಿಚಿತರು ಹತ್ಯೆ ಮಾಡಿದ್ದಾರೆಂದು ಬಿಂಬಿಸಿದ್ದ ಆರೋಪಿ ಬಂಧನ

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಅಪರಿಚಿತರು ಹತ್ಯೆ ಮಾಡಿದ್ದಾರೆಂದು ಬಿಂಬಿಸಿದ್ದ ಆರೋಪಿಯನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.

ವಿನಯ್ ಕುಮಾರ್ ಪತ್ನಿಯನ್ನು ಕೊಲೆ ಮಾಡಿ ಅರೆಸ್ಟ್ ಆದ ಪತಿ. ವಿನಯ್ ಮೂಲತಃ ಬಿಹಾರದವನಾಗಿದ್ದು, ಭಾನುವಾರ ಮುಂಜಾನೆ ತನ್ನ ಪತ್ನಿ ಗೀತಾ ದೇವಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ.

ರಾಮಮೂರ್ತಿ ನಗರದ ಮುಖ್ಯರಸ್ತೆಯ ಪ್ರೇರಣಾ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಆರೋಪಿ ವಿನಯ್ ಆ ಅಪಾರ್ಟ್ ಮೆಂಟ್‍ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ. ಭಾನುವಾರ ಸಾಂಸಾರಿಕ ವಿಚಾರವಾಗಿ ವಿನಯ್ ತನ್ನ ಪತ್ನಿ ಜೊತೆ ಜಗಳವಾಡಿ ಬಳಿಕ ಕೊಲೆ ಮಾಡಿದ್ದಾನೆ. ಬಳಿಕ ವಿನಯ್ ಅಪಾರ್ಟ್ ಮೆಂಟ್‍ನ ಪಾರ್ಕಿಂಗ್ ಜಾಗಕ್ಕೆ ಕರೆದೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ.

ಪೊಲೀಸ್ ವಿಚಾರಣೆಯ ಸಮಯದಲ್ಲಿ ಪತ್ನಿ ಕರೆ ಮಾಡಿ ಯಾರೋ ಅಪರಿಚಿತರು ಮನೆಗೆ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಳು ಎಂದು ವಿನಯ್ ಹೇಳಿದ್ದ.

ಪತ್ನಿ ಗೀತಾ ದೇವಿಯ ತಂಗಿಯ ಹೇಳಿಕೆ ಮೇರೆಗೆ ರಾಮಮೂರ್ತಿನಗರ ಪೊಲೀಸರು ವಿನಯ್ ನನ್ನು ಮತ್ತಷ್ಟು ವಿಚಾರಣೆ ಒಳಪಡಿಸಿದಾಗ ಸತ್ಯ ಪ್ರಕಟವಾಗಿದ್ದು ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *