ಮಕ್ಕಳೊಂದಿಗೆ ಮಲಗಿದ್ದ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ!

ಚಿತ್ರದುರ್ಗ: ಪತಿಯೇ ಪತ್ನಿಯನ್ನು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಬ್ಬಲ ರಂಗವ್ವನಹಳ್ಳಿಯಲ್ಲಿ ನಡೆದಿದೆ.

ಸಾಕಮ್ಮ(26) ಮೃತ ಮಹಿಳೆ. ಇವರು ಬಬ್ಬರ ರಂಗವ್ವನಹಳ್ಳಿಯ ವಾಸಿಗಳಾಗಿದ್ದು, ತನ್ನ ಪತಿ ಶ್ರೀಧರನಿಂದಲೇ ಹತ್ಯೆಗೀಡಾದ ದುರ್ದೈವಿ.

ಮಂಗಳವಾರ ರಾತ್ರಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದ ಸಾಕಮ್ಮ ಎಂಬವರ ಮೇಲೆ ಪತಿಯೇ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿ ಪರಾರಿಯಾಗಿದ್ದಾನೆ.

ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ, ಕುಡಿದ ಮತ್ತಿನಲ್ಲಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *