ಪತ್ನಿಯನ್ನು ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಪರಾರಿಯಾದ!

ಬೆಂಗಳೂರು: ಮಕ್ಕಳಾಗಿಲ್ಲವೆಂದು ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿ ನಡೆದಿದೆ.

ಅನುಸುಜ(24) ಪತಿಯಿಂದಲೇ ಕೊಲೆಯಾದ ದುರ್ದೈವಿ. ಆರೋಪಿ ಸಾಬು ಪತ್ನಿಯನ್ನೇ ಕೊಂದು ಪರಾರಿಯಾಗಿದ್ದಾನೆ. ಇನ್ನು ಪತಿ-ಪತ್ನಿ ಇಬ್ಬರು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಸಣ್ಣಬಡಗಾರನಹಳ್ಳಿಯವರಾಗಿದ್ದು, ಹುಲ್ಲಹಳ್ಳಿಯ ಹಾಲೊಬ್ಲಾಕ್ ಇಟಿಯಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು.

ಅನುಸುಜಾ ಹಾಗೂ ಸಾಬು ಮದುವೆಯಾಗಿ 4 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಈ ವಿಷಯವಾಗಿ ಹಲವು ಬಾರಿ ದಂಪತಿ ನಡುವೆ ಜಗಳ ನಡೆದಿತ್ತು. 15 ದಿನಗಳ ಹಿಂದೆ ಮೃತ ಅನುಸುಜ ತನ್ನ ತಾಯಿಯನ್ನು ಹುಲ್ಲಾಹಳ್ಳಿಗೆ ಕರೆಸಿಕೊಂಡಿದ್ದಳು. ಆದರೆ ಮತ್ತೆ ಬುಧವಾರ ರಾತ್ರಿ ಇದೆ ವಿಷಯವಾಗಿ ಜಗಳವಾಡಿದ್ದ ಪತಿ ಸಾಬು ಕುಡಿದ ಅಮಲಿನಲ್ಲಿ ಪತ್ನಿ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *