ಅನೈತಿಕ ಸಂಬಂಧ ಶಂಕೆ – ಕೊಡಲಿಯಿಂದ ಪತ್ನಿ ಹತ್ಯೆಗೈದ ಪತಿ

ರಾಯಚೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೇ ಪತ್ನಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

CRIME 2

ರೇಣುಕಾ (28) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಯನ್ನು ಜಟ್ಟೆಪ್ಪ ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿ ಆರೋಪಿ ಜಟ್ಟೆಪ್ಪ ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆಯಾದ ರೇಣುಕಾ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಅಂತ ಆರೋಪಿ ಶಂಕಿಸಿದ್ದಾನೆ. ಇದನ್ನೂ ಓದಿ: ಶಿವಮೊಗ್ಗ ಕಿಡಿಗೇಡಿಗಳಿಗೆ ಗುಂಡೇಟು ಬರೀ ಸ್ಯಾಂಪಲ್: ಕೆ.ಎಸ್ ಈಶ್ವರಪ್ಪ

ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಇಂದು ಬೆಳಗ್ಗೆ ಸಹ ಇದೇ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ವೇಳೆ ಮನೆಯಲ್ಲಿದ್ದ ಕೊಡಲಿಯಿಂದ ರೇಣುಕಾಳನ್ನು ಆರೋಪಿ ಹತ್ಯೆ ಮಾಡಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೊಬೈಲ್ ವಾಪಸ್ ಕೇಳಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *