ಪತ್ನಿ ಕುತ್ತಿಗೆಗೆ ಚಾಕುವಿನಿಂದ ಇರಿದು ಬಾಗಿಲು ಹಾಕಿಕೊಂಡು ಹೋದ ಪತಿ!

ಬೆಂಗಳೂರು: ಪತ್ನಿ ಕುತ್ತಿಗೆಗೆ ಚಾಕು ಇರಿದು ಪತಿ ಬಾಗಿಲು ಹಾಕಿಕೊಂಡು ಹೋದ ಘಟನೆ ಬೆಂಗಳೂರಿನ ಚೋಳೂರುಪಾಳ್ಯದ ಮಂಜುನಾಥನಗರದಲ್ಲಿ ನಡೆದಿದೆ.

ಮಂಜುನಾಥ್ ಚಾಕು ಇರಿದ ಆರೋಪಿ. ಸೋಮವಾರ ತಡರಾತ್ರಿ ಮಂಜುನಾಥ್ ತನ್ನ ಪತ್ನಿ ವೇದಕುಮಾರಿಗೆ ಚಾಕುವಿನಿಂದ ಇರಿದಿದ್ದನು. ಕುತ್ತಿಗೆಗೆ ಚಾಕುವಿನಿಂದ ಇರಿದು ಬಾಗಿಲು ಹಾಕಿಕೊಂಡು ಹೋಗಿದ್ದಾನೆ. ಅಷ್ಟೇ ಅಲ್ಲದೇ ಮಂಜುನಾಥ್ ಪ್ರತಿದಿನ ಕುಡಿದು ಮನೆಗೆ ಹೋಗುತ್ತಿದ್ದನು.

ಮಂಜುನಾಥ್ ಸೋಮವಾರ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಗಲಾಟೆ ಮಾಡಿಕೊಂಡು ಚಾಕುವಿನಿಂದ ಇರಿದಿದ್ದಾನೆ. ವೇದಕುಮಾರಿಯ ನರಳಾಟ ಕೇಳಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸದ್ಯ ವೇದಕುಮಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಈ ಪ್ರಕರಣ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *