ನಾನು ಯಾರಿಗೂ ಸಚಿವ ಸ್ಥಾನ ಕೇಳಿಲ್ಲ, ವಿರೋಧಿಸಿಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ನಾನು ಯಾರಿಗೂ ಸಚಿವ ಸ್ಥಾನ ನೀಡುವಂತೆ ಕೇಳಿಲ್ಲ. ಅಲ್ಲದೇ ಯಾರಿಗೂ ಸಚಿವ ಸ್ಥಾನ ನೀಡಬಾರದೆಂದು ವಿರೋಧ ವ್ಯಕ್ತಪಡಿಸಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತದ್ದೇ ಖಾತೆ ನೀಡುವಂತೆ ನಾನು ಬೇಡಿಕೆ ಇಟ್ಟಿಲ್ಲ. ಖಾತೆ ಹಂಚಿಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಅವರು ತಿಳಿಸಿದರು.

ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ನಾನು ಸಿದ್ಧವಾಗಿರುವೆ. ಪಕ್ಷದಲ್ಲಿ ಹಿರಿಯರಿಗೆ ಸಚಿವ ಸ್ಥಾನ ಬೇಡ, ಹೊಸಬರಿಗೆ ಅವಕಾಶ ಮಾಡಿಕೊಡು ಎನ್ನುವ ಚರ್ಚೆ ಪಕ್ಷದಲ್ಲಿ ನಡೆಯುತ್ತಿದೆ. ಆದರೆ ಹಿರಿಯರಿಗೂ ಸಚಿವ ಸ್ಥಾನ ನೀಡುವುದು ಅನಿವಾರ್ಯ. ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಾಗಿಲ್ಲ, ಈ ಕುರಿತು ಎಲ್ಲಿಯೂ ಬೇಡಿಕೆಯಿಟ್ಟಿಲ್ಲ ಎಂದು ಅವರು ಹೇಳಿದರು.

Comments

Leave a Reply

Your email address will not be published. Required fields are marked *