ರಾಜಕೀಯ ಗುರು ರಮೇಶ್ ಜಾರಕಿಹೊಳಿಗೆ ಮಹೇಶ್ ಕುಮಟಳ್ಳಿ ತಿರುಮಂತ್ರ

– ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ

ಬೆಳಗಾವಿ (ಚಿಕ್ಕೋಡಿ): ರಾಜಕೀಯ ಗುರು, ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಿರುಮಂತ್ರ ಹೇಳಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಬಿಡುವುದಿಲ್ಲ. ಅವರು ನಮ್ಮ ನಾಯಕರು ನಿಜ. ಆದರೆ ಪಕ್ಷದ ವರಿಷ್ಠರು ಕೂಡ ನಮ್ಮ ನಾಯಕರೇ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ತಿಳಿಸಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಪರ ಕಳೆದ 20 ದಿನಗಳಿಂದ ಅಥಣಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಪಕ್ಷ ಬಿಡುವ ಬಗ್ಗೆ ರಮೇಶ್ ಜಾರಕಿಹೊಳಿ ಅವರು ನನ್ನ ಬಳಿ ಏನನ್ನೂ ಹೇಳಿಕೊಂಡಿಲ್ಲ. ಈ ಹಿಂದೆ ನಾನು ಅಲ್ಲಿ ಹೋಗಿದ್ದೆ, ಇಲ್ಲಿದ್ದೆ ಎಂದು ಹೇಳಲಾಗಿತ್ತು. ಯಾರು ಏನೇ ಹೇಳಿದರೂ ನಾನು ಪಕ್ಷ ಬಿಡುವ ಮಾತೇ ಇಲ್ಲ ಎಂದು ಶಾಸಕರು ಸ್ಪಷ್ಟನೆ ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನವೊಲಿಸುವ ಯತ್ನ ಮಾಡಲಾಗುತ್ತದೆ. ಮೈತ್ರಿ ಸರ್ಕಾರ ಬೀಳಿಸಲು ಯಾವುದೇ ಅವಕಾಶ ನೀಡುವುದಿಲ್ಲ. ಸರ್ಕಾರವು 5 ವರ್ಷಗಳ ಕಾಲ ಅಧಿಕಾರದಲ್ಲಿ ಇರಲಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *