ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ: ದೇವೇಗೌಡ

ಚಿಕ್ಕಮಗಳೂರು: ವಿರೋಧ ಪಕ್ಷ ಬಿಜೆಪಿ, ಕಾಂಗ್ರೆಸ್ ಸ್ನೇಹಿತರು ಬೇರೆ ಬೇರೆ ರೀತಿ ಮಾತನಾಡುತ್ತಾರೆ. ನಾನು ಅದಕ್ಕೆಲ್ಲ ಉತ್ತರ ನೀಡಲ್ಲ. ಸದ್ಯ ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷ ಬೇರೆ ಬೇರೆ ರೀತಿ ಮಾತನಾಡುತ್ತಾರೆ. ಬಹುಶಃ ಇದೆಲ್ಲಾ ಅಂತ್ಯವಾಗುವ ಸಾಧ್ಯತೆಗಳಿವೆ. ಇನ್ನೊಂದು ತಿಂಗಳಲ್ಲಿ ಗೊಂದಲಗಳೆಲ್ಲಾ ಬಗೆಹರಿಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಸೀಟ್ ಹೊಂದಾಣಿಕೆ ಮಾಡಿಕೊಳ್ಳುವ ಉದ್ದೇಶಕ್ಕಾದರೂ ಅಂತ್ಯವಾಗುತ್ತದೆ. ಮೈತ್ರಿ ಸರ್ಕಾರದಲ್ಲಿ ಯಾವುದೇ ಒಡಕು ಬರದ ಹಾಗೆ ನೋಡಿಕೊಳ್ಳುತ್ತೇವೆ ಎಂದರು.

ನಾಳೆಯೇ ಮೈತ್ರಿ ಮುರಿದು ಬಿಳುತ್ತೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಆ ರೀತಿ ಅವಕಾಶ ಇಲ್ಲ. ಬಿಜೆಪಿ ರೆಸಾರ್ಟ್ ರಾಜಕೀಯದ ಕುರಿತು ಪ್ರತಿಕ್ರಿಯಿಸಿ ನಾನು ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಬಿಬಿಎಂಪಿ ಮೈತ್ರಿ ವಿಚಾರದಲ್ಲಿ ನಾನು ಭಾಗಿಯಾಗಿಲ್ಲ ಎಂದು ಕೈ ಮುಗಿದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸಹ ಸರ್ಕಾರಕ್ಕೆ ಅಪಾಯ ಆಗುವುದಿಲ್ಲ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿ ಸಹ ಅದೇ ರೀತಿ ಹೇಳಿದ್ದಾರೆ. ಹಂತ ಹಂತವಾಗಿ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿಯುತ್ತದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *