ನನ್ನ ಕೈ ಬಾಯಿ ಕಟ್ಟಿ ಹಾಕಲು ಬಂದವರನ್ನ ನಾನೇ ಕಟ್ಟಿ ಹಾಕುತ್ತೇನೆ: ರಮೇಶ್ ಕುಮಾರ್

ಕೋಲಾರ: ಸ್ಪೀಕರ್ ಆಗಿ ನೇಮಿಸಿರುವ ಮೂಲಕ ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ. ಹಾಗೇ ಅಂದುಕೊಳ್ಳುವವರ ಕೈ ಬಾಯಿಯನ್ನು ನಾನೇ ಕಟ್ಟಿ ಹಾಕುತ್ತೇನೆ ಎಂದು ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಹುದ್ದೆಯಲ್ಲಿದ್ದರೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಲ್ಲ, ಇದೇ ಹುದ್ದೆಯಲ್ಲಿದ್ದು ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ. ಜೂನ್ 7 ರಂದು ಕೆ.ಸಿ.ವ್ಯಾಲಿ ಯೋಜನೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ಈ ಹಿಂದೆ ಕೆ.ಸಿ.ವ್ಯಾಲಿ ಯೋಜನೆಗೆ ಕುಮಾರಸ್ವಾಮಿ ಅವರು ವಿರೋಧ ಮಾಡಿದ್ದರು. ಆದರೆ ಈಗ ವಿರೋಧ ಮಾಡಲು ಆಗೊಲ್ಲ. ನನ್ನ ಸ್ಪೀಕರ್ ಮಾಡುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಪಕ್ಷದ ವರಿಷ್ಠರು ನೀಡಿದ ಜವಾಬ್ದಾರಿ ನೀಡಿದ್ದಾರೆ. ಸರಿಯಾಗಿ ನಿಬಾಯಿಸಿಕೊಂಡು ಹೋಗುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರ ಉಳಿವು- ಬಿಳು ಆಯಾ ಪಕ್ಷದವರಿಗೆ ಬಿಟ್ಟಿದ್ದು. ನಾನು ಯಾವ ಪಕ್ಷಕ್ಕೂ ಸೇರಿಲ್ಲ, ಸ್ವತಂತ್ರ ಸದನ ನಡೆಸುವುದು ನನ್ನ ಜವಾಬ್ದಾರಿಯಾಗಿದೆ. ಈಗಾಗಲೇ ಬಿಜೆಪಿಯವರು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಅದೇ ವೇಳೆ ಕರ್ನಾಟಕ ವಿಧಾನಸಭೆ ಉಪಚುನಾವಣೆ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

Comments

Leave a Reply

Your email address will not be published. Required fields are marked *