ನನ್ನ ಗೆಲುವು ನಿಶ್ಚಿತ, ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ: ಕಾಂಗ್ರೆಸ್ ಅಭ್ಯರ್ಥಿ

ಮೈಸೂರು: ನನ್ನ ಗೆಲುವು ನಿಶ್ಚಿತ ಎಂದು ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಸಾಯಿ ಬಾಬಾ ದರ್ಶನ ಪಡೆದರು. ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತ ಸಾಯಿ ಬಾಬಾ ದೇವಸ್ಥಾನಕ್ಕೆ ಆಗಮಿಸಿ ಬೆಳ್ಳಿ ಪಾದವನ್ನು ಕಾಣಿಕೆಯಾಗಿ ನೀಡಿದ್ದಾರೆ. ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಅರ್ಚನೆ, ಹಾಲಿನ ಅಭಿಷೇಕ ಮಾಡಿಸಿದ್ದಾರೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ನನ್ನ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ. ಅಲ್ಲದೆ ಕ್ಲುಲ್ಲಕ ಕಾರಣಕ್ಕೆ ಜಗಳವಾಡಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಾನು ಗೆದ್ದ ಬಳಿಕ ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ. ಭಾನುವಾರ ಕೂಡ ಮೂರು ಜನ ಹೊಡೆದಾಡಿ ಆಸ್ಪತ್ರೆ ಸೇರಿದ್ದಾರೆ. ಎಲ್ಲರೂ ಕೂಡ ಸಮಯೋಚಿತದಿಂದ ವರ್ತಿಸಿ ಎಂದು ತಮ್ಮ ಕಾರ್ಯಕರ್ತರ ಬಳಿ ಮನವಿ ಮಾಡಿಕೊಂಡರು.

ಇದೇ ವೇಳೆ ಸರ್ಕಾರ ಇದೆ ಎಂದು ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು ಮಂಜುನಾಥ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Comments

Leave a Reply

Your email address will not be published. Required fields are marked *