ಏರ್ ಸ್ಟ್ರೈಕ್ ಮಾಸ್ಟರ್ ಮೈಂಡ್ ಬೀರೇಂದ್ರ ಸಿಂಗ್ ಧನೋವಾ

-ಭದ್ರತಾ ಸಲಹೆಗಾರ ಧೋವಲ್‍ಗೆ ಧನೋವಾ ಸಲಹೆ..!?

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿದ್ದ ಧನೋವಾ ಅವರೇ ಏರ್ ಸ್ಟ್ರೈಕ್‍ಗೆ ಸೂಚಿಸಿದ್ದರಂತೆ.

ಬೀರೇಂದ್ರ ಸಿಂಗ್ ಧನೋವಾ ಇಂಡಿಯನ್ ಏರ್ ಫೋರ್ಸ್ ನ ಮುಖ್ಯಸ್ಥರು. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಅವಿರತ ಶ್ರಮಿಸುತ್ತಿದ್ದಾರೆ. ಪಾಕಿಸ್ತಾನದ ನೆಲಕ್ಕೆ ನುಗ್ಗಿ ಬಾಲ್‍ಕೋಟ್‍ನಲ್ಲಿ 350 ಉಗ್ರರ ಚೆಂಡಾಡಿದ ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್. ಅಲ್ಲದೆ, ಈ ಸಂಪೂರ್ಣ ಆಪರೇಷನ್ ನಿರ್ವಹಿಸಿದವರು.

ಪಾಕಿಸ್ತಾನ ಪ್ರಾಯೋಜಿತ ಜೈಶ್ ಉಗ್ರರು, ಪುಲ್ವಾಮಾದ ಆವಂತಿಪೋರ್ ನಲ್ಲಿ ಫೆಬ್ರವರಿ 14ರಂದು ಮಧ್ಯಾಹ್ನ 3.15ರ ವೇಳೆಗೆ ನಡೆದ ಆತ್ಮಾಹುತಿ ದಾಳಿಗೆ 40 ಯೋಧರ ಹುತಾತ್ಮರಾಗಿದ್ದರು. ಘಟನೆ ಬಳಿಕ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋಆ ಸಲಹೆ ನೀಡಿದ್ದರು ಅಂತ ತಿಳಿದು ಬಂದಿದೆ.

ಧನೋವಾ ಅವರು 1999ರ ಕಾರ್ಗಿಲ್ ಯುದ್ಧದ ವೇಳೆ ಫೈಟರ್ ಸ್ಕ್ವಾಡ್ರನ್ ಮತ್ತು ಅಂದಿನ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದ ಎ.ವೈ ಟಿಪ್ನಿಸ್ ಅವರಿಗೆ ಸಾಥ್ ನೀಡಿದ್ದರು. ಐಎಎಫ್ ಪೈಲಟ್‍ಗಳಿಗೆ ಮಾನಸಿಕ ಸ್ಥೈರ್ಯ ತುಂಬಲು ಅಂದಿನ ಮಾರ್ಷಲ್ ಟಿಫ್ನಿಸ್ ಅವರೇ ಖುದ್ದಾಗಿ ಪೈಲಟ್‍ಗಳ ಜೊತೆಗೆ ತೆರಳಿದ್ದರು. ಆದರೆ ಟಿಪ್ನಿಸ್ ಹಾಗೂ ಪೈಲಟ್‍ಗಳ ಪ್ರಾಣ ಕಾಪಾಡಲು ಧನೋವಾ ಅವರು ರಾತ್ರಿ ವೇಳೆ ಅತ್ಯಂತ ಎತ್ತರದದಿಂದಲೇ ದಾಳಿ ಮಾಡೋಣ ಅಂತ ಐಡಿಯಾ ಕೊಟ್ಟಿದ್ದರು. ಇದರಲ್ಲಿ ಯಶಸ್ವಿ ಸಹ ಆಗಿದ್ದರು.

1978ರಲ್ಲಿ ವಾಯು ಸೇನೆ ಸೇರಿದ್ದ ಧನೋವಾ, ಎಚ್‍ಜೆಟಿ-16 ಕಿರಣ್, ಸೆಪೆಕ್ಯಾಟ್, ಜಾಗ್ವಾರ್, ಮಿಗ್-29 ಹಾಗೂ ಸುಖೋಯ್-30 ಎಂಕೆಐ ಫೈಟರ್ ಜೆಟ್‍ಗಳನ್ನು ಹಾರಿಸಿದ್ದಾರೆ. ಈ ಮೂಲಕ ಪರಿಣತ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 37 ವರ್ಷಗಳ ಸೇವೆಯಲ್ಲಿ ಹಲವಾರು ಅತ್ಯುನ್ನತ ಪ್ರಶಸ್ತಿ, ಪದಕಗಳನ್ನು ಧನೋವಾ ಪಡೆದಿದ್ದಾರೆ.

https://www.youtube.com/watch?v=LuNOYN08Gu0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *