ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರುಗಳಾದ ಡಿಕೆಶಿ ಕಾರಣ: ಎಸ್‌.ಟಿ.ಸೋಮಶೇಖರ್‌

ಬೆಂಗಳೂರು: ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ನನ್ನ ಗುರುಗಳಾದ ಡಿ.ಕೆ. ಶಿವಕುಮಾರ್ (D.K. Shivakumar) ಕಾರಣ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ (S.T. Somashekar) ಹೇಳಿದರು.

ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಡಿಸಿಎಂ ಡಿಕೆಶಿ ಅವರನ್ನು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹಾಡಿ ಹೊಗಳಿದ್ದಾರೆ. ನಾನು ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡುವುದಕ್ಕೆ ನನ್ನ ಗುರುಗಳಾದ ಡಿ.ಕೆ. ಶಿವಕುಮಾರ್ ಕಾರಣ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ: ಯಡಿಯೂರಪ್ಪ

ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕು ಅಂತ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದವರು ಡಿ.ಕೆ. ಶಿವಕುಮಾರ್. ಅವರ ಶ್ರಮದಿಂದ ನಾನು ಇವತ್ತು ಇಂತಹ ವೇದಿಕೆ ಮೇಲೆ ನಿಂತು ಮಾತನಾಡಲು ಕಾರಣವಾಗಿದೆ ಎಂದು ನೆನಪಿಸಿಕೊಂಡರು.

ನಾನು ಈ ಮಟ್ಟಕ್ಕೆ ಬೆಳೆಯಲು 100 ಕ್ಕೆ 100 ಕಾರಣ ಡಿಕೆಶಿ. ನಿಮ್ಮಲ್ಲಿ ಒಳಗೊಂದು ಹೊರಗೊಂದು ಇಲ್ಲ. ನಿಮ್ಮಲ್ಲಿ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ನೀವು ಕೆಲಸ ಮಾಡ್ತಾ ಇದ್ದೀರಿ ಡಿ.ಕೆ. ಶಿವಕುಮಾರ್‌ ಅವರನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]