ಅನಂತಕುಮಾರ್ ಹೆಗಡೆಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಭೀತಿ!

ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರಿಗೆ 2019ರ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪುವ ಭೀತಿ ಉಂಟಾಗಿದ್ದು, ತಮ್ಮ ಆತಂಕವನ್ನು ಶುಕ್ರವಾರ ಎಂ.ಕೆ.ಹುಬ್ಬಳ್ಳಿಯಲ್ಲಿ ಹೊರ ಹಾಕಿದ್ದಾರೆ.

ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡನಗೌಡರ ಅಭಿನಂದನಾ ಕಾರ್ಯಕ್ರಮದಲ್ಲಿ ಅನಂತಕುಮಾರ್ ಹೆಗಡೆ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ನನ್ನ ಯೋಗ್ಯತೆ ನೋಡಿ ಜನರು ವೋಟ್ ಕೊಟ್ಟಿಲ್ಲ. ಬದಲಿಗೆ ಪ್ರೀತಿ, ವಿಶ್ವಾಸದ ಮೇಲೆ ಮತ ಕೊಟ್ಟಿದ್ದಿರಿ. ಪಾರ್ಟಿ ಮೇಲಿನ ಬದ್ಧತೆ ಇಲ್ಲಿಯ ತನಕ ತಂದು ನಿಲ್ಲಿಸಿದೆ. 5 ಭಾರೀ ಎಂಪಿ ಮಾಡಿದ್ದಿರಿ ಇದಕ್ಕಿಂತ ಹೆಚ್ಚೆನು ಬೇಕು. 5 ಬಾರಿ ವೋಟಿನ ಗೌರವ ಕಡಿಮೆ ಆಗದಂತೆ ನೋಡಿಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಲೋಕಾಸಭಾ ಚುನಾವಣೆ – ಬಿಜೆಪಿಯ ಹಾಲಿ 150 ಎಂಪಿಗಳಿಗೆ ಟಿಕೆಟ್ ಇಲ್ಲ!

ಮುಂದಿನ ಬಾರಿ ಉತ್ತರ ಕನ್ನಡ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುವುದು ಗೊತ್ತಿಲ್ಲ. ಆದರೆ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬೇಕು. ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ ಎಂದು ಅನಂತಕುಮಾರ್ ಹೆಗಡೆ ತಮಗೆ ಟಿಕೆಟ್ ಸಿಗುತ್ತೋ, ಇಲ್ಲವೋ ಎಂಬ ಆತಂಕವನ್ನು ಹೊರಹಾಕಿದರು.

Comments

Leave a Reply

Your email address will not be published. Required fields are marked *