ಇದು ನಂಗೆ ಡು ಆರ್ ಡೈ, ರಾಜಕೀಯವಾಗಿ ಇದು ಲಾಸ್ಟ್ ಚಾನ್ಸ್: ಜಾಧವ್

ಕಲಬುರಗಿ: ಬಿಜೆಪಿ ನಾಯಕರೆಲ್ಲ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆದ್ದೇ ಗೆಲ್ತಾರೆ ಎಂದು ಓಡಾಡುತ್ತಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಮಾತ್ರ ಇದು ನನಗೆ ಡು ಆರ್ ಡೈ. ಇದು ನನಗೆ ಕೊನೆಯ ಅವಕಾಶ ಎಂದು ಹೇಳಿದ್ದಾರೆ.

ಹೌದು. ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು ಶುಕ್ರವಾರ ರಾತ್ರಿ ಕಲಬುರಗಿಯ ಎಸ್‍ಸಿ ಸಮಾವೇಶದಲ್ಲಿ ಮಾತನಾಡುತ್ತಾ ಇದು ನನಗೆ ಡು ಆರ್ ಡೈ ಅನ್ನುವಂತ ಸ್ಥಿತಿ. ನನಗೆ ಇನ್ನೂ ಸೆಟ್ ಆಗುತ್ತಿಲ್ಲ. ರಾಜಕೀಯವಾಗಿ ಇದು ಲಾಸ್ಟ್ ಚಾನ್ಸ್. ಹೀಗಾಗಿ ನೀವು ನನ್ನನ್ನ ಕೈ ಬಿಡಬೇಡಿ. ಈ ಯುದ್ಧದಲ್ಲಿ ನನ್ನನ್ನು ಗೆಲ್ಲಿಸಬೇಕು ಎಂದು ಜನರನ್ನ ಮನವಿ ಮಾಡಿದ್ದಾರೆ.

 

ಇದೇ ವೇಳೆ ಗೋವಿಂದ ಕಾರಜೋಳ ಅವರೇ ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕು ಎಂದು ವಿನಂತಿಸಿಕೊಂಡರು. ಒಟ್ಟಿನಲ್ಲಿ ಇದೀಗ ಖರ್ಗೆ ವಿರುದ್ಧ ಸ್ಪರ್ಧೆ ಮಾಡಿ ಸಂಸದನಾಗುವ ಕನಸು ಕಂಡಿದ್ದ ಉಮೇಶ್ ಜಾಧವ್ ಈ ರೀತಿ ಹೇಳಿದ್ಯಾಕೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

 

Comments

Leave a Reply

Your email address will not be published. Required fields are marked *