ಹುತಾತ್ಮ ಯೋಧನ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 1 ಕೋಟಿ ರೂ. ಪರಿಹಾರ ಘೋಷಣೆ

ಭೋಪಾಲ್: ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತ ಮಟ್ಟ ಮಧ್ಯಪ್ರದೇಶದ ವೀರ ಯೋಧ ಅಶ್ವಿನಿ ಕುಮಾರ್ (36) ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.

ಯೋಧನ ವೀರ ಮರಣದ ಕುರಿತು ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಅವರು, ಕುಟುಂಬಸ್ಥರಿಗೆ ಸಂತ್ವಾನ ತಿಳಿಸಿದ್ದಾರೆ. ಅಲ್ಲದೇ ಸರ್ಕಾರದಿಂದ ಒಂದು ಕೋಟಿ ರೂ. ಪರಿಹಾರ ಹಾಗೂ ಕುಟುಂಬ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪ್ರಕಟಿಸಿದ್ದಾರೆ.

ಮಧ್ಯಪ್ರದೇಶ ಕೋಹ್ವಾಲ್ ಶಿರೋರ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಅಶ್ವಿನಿ ಕುಮಾರ್, ಜಮ್ಮು ಕಾಶ್ಮೀರದ ಸಿಆರ್‍ಪಿಎಫ್ 35 ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಶ್ವಿನಿ ಕುಮಾರ್ ಅವರ ಕುಟುಂಬ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದು, ಕುಟುಂಬದಲ್ಲಿ ಹಿರಿಯರಾಗಿದ್ದ ಅಶ್ವಿನಿ ಕುಮಾರ್ ಅವರನ್ನೇ ಕುಟುಂಬ ಅಶ್ರಯಿಸಿತ್ತು.

ಯೋಧನ ಕುಟುಂಬದಲ್ಲಿ ಪೋಷಕರೊಂದಿಗೆ ಐದು ಮಂದಿ ಸಹೋದರರು ಇದ್ದು, ಇತ್ತೀಚೆಗಷ್ಟೇ ಅಶ್ವಿನಿ ಕುಮಾರ್ ಅವರಿಗೆ ಮದುವೆ ಮಾಡಲು ಕುಟುಂಬ ನಿರ್ಧರಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *