ಆಪ್ತರ ಮೇಲೆ ಐಟಿ ದಾಳಿ ಮಾಡಿದ್ರೆ ಬಿಎಸ್‍ವೈಗೆ ಏನು ಸಂಬಂಧ: ಸೋಮಣ್ಣ

ವಿಜಯಪುರ: ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಏನು ಸಂಬಂಧ ಎಂದು ವಸತಿ ಸಚಿವ ವಿ. ಸೋಮಣ್ಣ ಐಟಿ ರೇಡ್ ಸಮರ್ಥಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮೇಲನಲ್ಲಿ ಮಾತನಾಡಿದ ಅವರು, ಐಟಿ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದ್ದಾರೆ. ಮಾಜಿ ಸಿಎಂ ಬಿಎಸ್‍ವೈ ಅವರಿಗೆ ಇದು ಸಂಬಂಧವಿಲ್ಲ. ಆಪ್ತರ ಮೇಲೆ ಐಟಿ ದಾಳಿ ಮಾಡಿದ್ರೇ ಬಿಎಸ್‍ವೈಗೆ ಏನು ಸಂಬಂಧ. ನನ್ನ ಆಪ್ತ ಮಾಡಿದ್ದರೆ ನನಗೇನು ಸಂಬಂಧ ಇರುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಯಾರದೋ ಮನೆಯಲ್ಲಿ ಏನೋ ಆದ್ರೇ ಬಿಎಸ್‍ವೈ ಅವರಿಗೇನು? ಐಟಿ ರೇಡ್ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ನಾನು ಬೆಂಗಳೂರಿಗೆ ಹೋದ ಬಳಿಕ ಈ ಕುರಿತು ಮಾಹಿತಿ ತಿಳಿದುಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಎರಡು ರಾಜ್ಯದ ಗುತ್ತಿಗೆದಾರರ ಮಧ್ಯೆ ಗಲಾಟೆ – ಬಿಎಸ್‌ವೈ ಪಿಎ ಮೇಲೆ ಐಟಿ ದಾಳಿ

ಯಡಿಯೂರಪ್ಪ ನಮ್ಮ ಪಕ್ಷದ ಪಕ್ಷಾತೀತ ನಾಯಕರು. ಕೆಲವು ನಿರ್ಧಾರವನ್ನು ಪಕ್ಷ ನಿರ್ಧಾರ ಮಾಡುತ್ತದೆ. ಆ ಪ್ರಕ್ರಿಯೆಗಳು ಅದರ ಪಾಡಿಗೆ ಆಗುತ್ತದೆ ಎಂದರು. ಎಚ್‍ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಆರೋಪ ಮಾಡುತ್ತಿರುವುದರ ಬಗ್ಗೆ ಮಾತನಾಡಿ, ಚುನಾವಣೆ ಗಿಮಿಕ್‍ಗಾಗಿ ಎಚ್‍ಡಿಕೆ ಆರ್‌ಎಸ್‌ಎಸ್‌ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚೆಗೆ ಮಾಜಿ ಸಿಎಂ ಎಚ್‍ಡಿಕೆ ಪುಸ್ತಕ ಓದುತ್ತಿದ್ದಾರೆ. ಪುಸ್ತಕ ಓದುವ ಮೂಲಕ ವಿವಿಧ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ವಿಜಯೇಂದ್ರ ಮಾಡಿದ ಭ್ರಷ್ಟಾಚಾರಕ್ಕೆ ಈ ದಾಳಿ ಸಾಕ್ಷಿ: ಎಚ್. ವಿಶ್ವನಾಥ್

Comments

Leave a Reply

Your email address will not be published. Required fields are marked *