ವಿಶ್ವದ ಬಾಹ್ಯಾಕಾಶ ಇತಿಹಾಸದಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಭಾರತ

ನವದೆಹಲಿ: ಭಾರತ ಈಗ ಬಾಹ್ಯಾಕಾಶದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವ ಸಾಮರ್ಥ್ಯವನ್ನು ಪಡೆದಿದೆ. ಬಾಹ್ಯಾಕಾಶಲ್ಲಿ ಭಾರತ ತನ್ನ ಕ್ಷಿಪಣಿಯನ್ನು ಬಳಸಿಕೊಂಡು ಮತ್ತೊಂದು ಉಪಗ್ರಹವನ್ನು ಹೊಡೆದು ಉರುಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇಯ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಈ ವಿಶೇಷ ಸಾಧನೆಯ ಮೂಲಕ ಭಾರತ ವಿಶ್ವದ ಭೂಪಟದಲ್ಲಿ ಸ್ಥಾನ ಪಡೆದಿದೆ. ಈ ಸಾಧನೆಗೆ ಕಾರಣವಾದ ಎಲ್ಲಾ ವಿಜ್ಞಾನಿಗಳನ್ನು ಮೋದಿ ಅಭಿನಂದಿಸಿದರು.

ಪ್ರಯೋಗಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಶತ್ರು ರಾಷ್ಟ್ರಗಳ ಉಪಗ್ರಹವನ್ನು ಭಾರತ ಬಾಹ್ಯಾಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯವನ್ನು ಪಡೆದಿದೆ.

 

Comments

Leave a Reply

Your email address will not be published. Required fields are marked *