ಭಾರತದ ಬಾಂಬ್ ದಾಳಿಗೆ ಜೈಷ್ ಉಗ್ರರ ಅತಿ ದೊಡ್ಡ ಕ್ಯಾಂಪ್ ಧ್ವಂಸ

ನವದೆಹಲಿ: ಭಾರತದ ವಾಯುಸೇನೆ ಜೈಷ್ ಸಂಘಟನೆಯ ಅತಿ ದೊಡ್ಡ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿ ಧ್ವಂಸ ಮಾಡಿದೆ.

ಗಡಿನಿಯಂತ್ರಣ ರೇಖೆಯನ್ನು ದಾಟಿ ನಡೆದ ಏರ್ ಸ್ಟ್ರೈಕ್ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಗುರಿಯಿದ್ದ ಪ್ರದೇಶಗಳು ಜೈಷ್ ಉಗ್ರರ ಕ್ಯಾಂಪ್ ಆಗಿತ್ತು. ಹಲವು ಉಗ್ರರು, ತರಬೇತಿದಾರರು ಮತ್ತು ಕಮಾಂಡರ್ ಗಳು ನಮ್ಮ ದಾಳಿಯಲ್ಲಿ ಹತ್ಯೆಯಾಗಿದ್ದಾರೆ. ದಾಳಿ ನಡೆದ ಸ್ಥಳಗಳು ಅರಣ್ಯ ಪ್ರದೇಶದಲ್ಲಿದ್ದು ಯಾವುದೇ ಜನರಿಗೆ ಹಾನಿಯಾಗಿಲ್ಲ ಎಂದು ತಿಳಿಸಿದರು.

ಬಾಲಕೋಟ್ ಉಗ್ರರ ನೆಲೆಯನ್ನು ಮೌಲಾನ ಯೂಸೂಫ್ ಅಜರ್ ಅಲಿಯಾಸ್ ಉಸ್ತಾದ್ ನೋಡಿಕೊಳ್ಳುತ್ತಿದ್ದ. ಈತ ಜೈಷ್ ಮುಖ್ಯಸ್ಥ ಮಸೂದ್ ಅಜರ್ ಸಹೋದರನಾಗಿದ್ದಾನೆ ಎಂದು ಗೋಖಲೆ ಮಾಹಿತಿ ನೀಡಿದರು. ಬಾಲಕೋಟ್ ಜೈಷ್ ಸಂಘಟನೆಯ ಅತಿ ದೊಡ್ಡ ಕ್ಯಾಂಪ್ ಆಗಿತ್ತು ಎನ್ನುವ ಮಾಹಿತಿ ನೀಡಿದರು.

ಉಗ್ರರ ಬಗ್ಗೆ ಭಾರತ ಹಲವು ಬಾರಿ ಮಾಹಿತಿ ನೀಡಿದರೂ ಪಾಕಿಸ್ತಾನ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಹೀಗಾಗಿ ಈ ಬಾರಿ ನಾವೇ ನೇರವಾಗಿ ಹೋಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದೇವೆ ಎಂದು ದಾಳಿ ಬಗ್ಗೆ ಸಮರ್ಥನೆ ನೀಡಿದರು.

ಇದೇ ವೇಳೆ ಜೈಷ್ ಸಂಘಟನೆ ದೇಶದ ಹಲವೆಡೆ ಆತ್ಮಾಹುತಿ ದಾಳಿ ನಡೆಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ನಮಗೆ ಖಚಿತ ಗುಪ್ತಚರ ಮಾಹಿತಿಗಳು ಸಿಕ್ಕಿವೆ ಎಂದು ಗೋಖಲೆ ತಿಳಿಸಿವೆ.

https://www.youtube.com/watch?v=m8US3svZ58Q

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *