ನೌಕಾಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಮೂವರು ಪೈಲೆಟ್‌ಗಳ ರಕ್ಷಣೆ

ಮುಂಬೈ: ಮುಂಬೈ ಕರಾವಳಿ ತೀರ ಪ್ರದೇಶದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ (Indian Navy Helicopter) ತುರ್ತು ಭೂಸ್ಪರ್ಶವಾಗಿದೆ‌ (Emergency Landing). ಕೂಡಲೇ ನೌಕಾಪಡೆಯ ಗಸ್ತು ನೌಕೆಯ ಮೂಲಕ ಹುಡುಕಾಟ ನಡೆಸಿ, ರಕ್ಷಣಾ ಕಾರ್ಯಚರಣೆ ಮೂಲಕ ಮೂವರು ಪೈಲಟ್‌ಗಳನ್ನು ರಕ್ಷಿಸಲಾಗಿದೆ. ಈ ಬಗ್ಗೆ ನೌಕಾಪಡೆ ತನಿಖೆಗೆ ಆದೇಶಿಸಿದೆ.

ಘಟನೆ ಬಗ್ಗೆ ನೌಕಾಪಡೆ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ನೀಡಿದೆ. ಭಾರತೀಯ ನೌಕಾಪಡೆ ALH ಮುಂಬೈನಿಂದ ತೀರಕ್ಕೆ (Mumbai Coast) ಹತ್ತಿರದಲ್ಲಿದೆ. ತಕ್ಷಣದ ನೌಕಾ ಗಸ್ತು ಕ್ರಾಫ್ಟ್ ಮೂಲಕ ಹೆಲಿಕಾಪ್ಟರ್‌ನಲ್ಲಿದ್ದ ಮೂವರ ಸಿಬ್ಬಂದಿಯನ್ನು ರಕ್ಷಿಸಲಾಯಿತು ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸೇನೆಯ ಶಸ್ತ್ರಸಜ್ಜಿತ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಪತನಗೊಂಡು ಅದರಲ್ಲಿದ್ದ ಐವರು ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತದ ನಂತರ, ದೇಶದಲ್ಲಿ ಸೇವೆಯಲ್ಲಿರುವ 300ಕ್ಕೂ ಹೆಚ್ಚು ALH ಗಳನ್ನು ಮುನ್ನೆಚ್ಚರಿಕೆ ಭಾಗಯಾಗಿ ಸುರಕ್ಷತಾ ತಪಾಸಣೆ ನಡೆಸಲಾಗಿತ್ತು. ಇದನ್ನೂ ಓದಿ: ದೆಹಲಿ ಮದ್ಯನೀತಿ ಹಗರಣ – KCR ಪುತ್ರಿ ಕವಿತಾಗೆ ED ಸಮನ್ಸ್

ಅದಕ್ಕೂ ಮುನ್ನ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ಪತನಗೊಂಡು ಅದರ ಪೈಲಟ್‌ಗಳಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಈ ವರ್ಷದ ಆರಂಭದಲ್ಲಿ ರಾಜ್ಯ ರಾಜಧಾನಿ ಭೋಪಾಲ್‌ನಿಂದ 400 ಕಿಮೀ ದೂರದಲ್ಲಿರುವ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಪತನಗೊಂಡು ತರಬೇತಿ ವಿಮಾನದ ಪೈಲಟ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಆಪ್ ನಾಯಕರ ಬಂಧನ – ಹೋಳಿ ತೊರೆದು ಧ್ಯಾನ ಆರಂಭಿಸಿದ ಕೇಜ್ರಿವಾಲ್

Comments

Leave a Reply

Your email address will not be published. Required fields are marked *