ಇಂದಿರಾ ಕ್ಯಾಂಟೀನ್ ಅಸಲಿ ಮುಖ: ತಪ್ಪನ್ನು ಒಪ್ಪಿಕೊಂಡ ಬಿಬಿಎಂಪಿ

ಬೆಂಗಳೂರು: ಇಂದಿರಾ ಕ್ಯಾಂಟಿನ್ ಗಾಗಿ ಅರಮನೆ ಮೈದಾನದಲ್ಲಿ ಅಡುಗೆ ಮಾಡುತ್ತಿರುವ ವಿಚಾರದ ಬಗ್ಗೆ ಬಿಬಿಎಂಪಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ.

ಪಬ್ಲಿಕ್ ಟಿವಿ ಬೆಳಗ್ಗೆಯಿಂದ ಇಂದಿರಾ ಕ್ಯಾಂಟಿನ್ ಅಸಲಿ ಸುದ್ದಿ ಪ್ರಸಾರ ಮಾಡಿದ ಬಳಿಕ ಶುಕ್ರವಾರ ಮಧ್ಯಾಹ್ನ ಬಿಬಿಎಂಪಿ ಮೇಯರ್ ಪದ್ಮಾವತಿ ಮತ್ತು ಆಯುಕ್ತ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

ನಮ್ಮ ಕಡೆಯಿಂದ ತಪ್ಪಾಗಿದೆ. ನಾವು ಮೊದಲೇ ಹೇಳಬೇಕಿತ್ತು. ಆಡುಗೆ ಮನೆಗಳು ಇನ್ನೂ ತಯಾರಾಗಿಲ್ಲ. ಹದಿನೈದು ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಮಂಜುನಾಥ್ ಪ್ರಸಾದ್ ಹೇಳಿದರು.

ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ನಾವು ಯಶಸ್ಸು ಕಂಡಿದ್ದು, ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಈ ಯೋಜನೆ ಸಂಪೂರ್ಣವಾಗಿ ಜಾರಿಯಾಗಬೇಕಾದರೆ ಸ್ವಲ್ಪ ಕಾಲವಲಾಶ ಬೇಕಾಗುತ್ತದೆ. ನಿರೀಕ್ಷೆಗಿಂತ ಹೆಚ್ಚು ಜನರು ಬರುತ್ತಿದ್ದಾರೆ. ಆದರೆ ನಾವು ಮೊದಲೇ ನಿಗದಿ ಪಡಿಸಿದ ಸಂಖ್ಯೆ ಅನುಗುಣವಾಗಿ ಆಹಾರವನ್ನು ವಿತರಣೆ ಮಾಡುತ್ತೇವೆ ಎಂದು ಮೇಯರ್ ಪದ್ಮಾವತಿ ಹೇಳಿದರು.

ರಾಜ್ಯ ಸರ್ಕಾರದಿಂದ 200 ಕೋಟಿ ಹಣ ನೀಡಲಾಗಿದೆ. ಟೆಂಡರ್ ನಲ್ಲಿ 7 ಜನ ಭಾಗಿಯಾಗಿದ್ದರು. ಇದರಲ್ಲಿ ಅತ್ಯಂತ ಕಡಿಮೆ ಬಿಡ್ ಮಾಡಿದ್ದವರಿಗೆ ನಾವು ಟೆಂಡರ್ ನೀಡಿದ್ದೇವೆ. ಕ್ಯಾಟರಿಂಗ್ ಸರ್ವೀಸ್ ಗಳ ಕುರಿತಂತೆ ವೆಬ್ ಸೈಟ್ ಗಳಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ಮಂಜುನಾಥ್ ಪ್ರಸಾದ್ ವಿವರಿಸಿದರು.

 

Comments

Leave a Reply

Your email address will not be published. Required fields are marked *